Friday, June 27, 2025

ಕಂಬಳಬೆಟ್ಟು: 360 ರಂಝಾನ್ ಕಿಟ್ ವಿತರಣೆ

ವಿಟ್ಲ: ಕಂಬಳಬೆಟ್ಟು ಮುಹಿಯುದ್ದೀನ್ ಮತ್ತು ಇಬ್ರಾಹಿಂ ಮಸೀದಿಯ ಪದಾಧಿಕಾರಿಗಳ, ದಾನಿಗಳ, ನುಶ್ರತ್ತುಲ್ ಮಸಾಕೀನ್ ಯಂಗ್‍ಮೆನ್ಸ್ ಹಾಗೂ ಜನಪ್ರಿಯ ಟ್ರಸ್ಟ್ ನೇತೃತ್ವದಲ್ಲಿ ಸರ್ವಧರ್ಮಿಯರಿಗೆ ಒಟ್ಟು 360 ಕುಟುಂಬಗಳಿಗೆ ರಂಝಾನ್ ಕಿಟ್ ಹಾಗೂ ದಿನಸಿ ಸಾಮಗ್ರಿ ವಿತರಿಸಲಾಯಿತು.
ವಲಸೆ ಕಾರ್ಮಿಕರಿಗೆ ಹಾಗೂ ಸ್ಥಳೀಯ ಅನ್ಯ ಧರ್ಮಿಯರಿಗೆ ವಿತರಿಸಲಾಯಿತು. ಕಂಬಳಬೆಟ್ಟು ಖತೀಬು ಇಬ್ರಾಹಿಂ ಮದನಿ ದುವಾಃ ಮಾಡಿದರು. ಮಸೀದಿ ಅಧ್ಯಕ್ಷ ಮೊಹಿದು ಹಾಜಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಹಾಜಿ ಬದ್ರಿಯಾ, ಕಾರ್ಯದರ್ಶಿ ಶಾಹುಲ್ ಹಮೀದ್ ನೆಕ್ಕರೆ, ಉಪಾಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಸುನ್ನೀ, ಕೋಶಾಧಿಕಾರಿ ಖಾದರ್ ನೆಕ್ಕರೆ, ಅಬ್ಬಾಸ್ ದಾಸರಬೆಟ್ಟು, ಮೊಹಮ್ಮದ್ ಕೆಮ್ಮಾಯಿ, ಹಸೈನಾರ್ ಕೊಳಂಬೆ ಬಾಂಬೆ, ಮೊಹಮ್ಮದ್, ನೌಶೀನ್ ಮೊದಲಾದವರು ಭಾಗವಹಿಸಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...