Thursday, February 13, 2025

ಕಳ್ಳಿಗೆ ಕನಪ್ಪಾಡಿ ತ್ತಾಯ ದೈವಸ್ಥಾನದ ಬಸವ ಸುಬ್ಬು ಇನ್ನಿಲ್ಲ

ಬಂಟ್ವಾಳ: ದ.ಕ.ಜಿಲ್ಲೆಯ ಕಾರಣೀಕ ದೈವಸ್ಥಾನ ವಾದ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪ್ಪಾಡಿತ್ತಾಯ ದೈವಸ್ಥಾನದ ಬಸವ ಸುಬ್ಬ (28) ಸೋಮವಾರ ಬೆಳಿಗ್ಗೆ ಅಸೌಖ್ಯದಿಂದ ಅಸುನೀಗಿದೆ.
ಈ ಬಸವ ಕಳೆದ 28 ವರ್ಷಗಳಿಂದ ಕಾರಣೀಕ ಕ್ಷೇತ್ರ ಕನಪ್ಪಾಡಿ ದೈವಸ್ಥಾನದ ಸೇವೆಯಲ್ಲಿ ತೊಡಗಿಸಿಕೊಂಡಿತ್ತು.
ಕಳ್ಳಿಗೆ , ತುಂಬೆ, ಬಂಟ್ವಾಳ ಮೂಡ, ನಡು ಹೀಗೆ ನಾಲ್ಕು ಗ್ರಾಮಗಳಿಗೆ ಸಂಬಂಧಿಸಿದಂತೆ ಅತ್ಯಂತ ಕಾರಣೀಕ ಕ್ಷೇತ್ರ ವಾದ ಕನಪ್ಪಾಡಿ ದೈವಸ್ಥಾನದ ಸೇವೆ ಮಾಡುತ್ತಾ ಬಂದಿತ್ತು. ‌
ಆದರೆ ಕಳೆದ ಒಂದು ವರ್ಷಗಳಿಂದ ಈ ಸುಬ್ಬುವಿಗೆ ಆರೋಗ್ಯ ದಲ್ಲಿ ಸಮಸ್ಯೆ ಉದ್ಭವಿಸುವ ಮೂಲಕ ಕೊನೆಯುಸಿರುಳೆಯಿತು.
ಕಳ್ಳಿಗೆ ಗ್ರಾಮದ ಗಾಣದಕೊಟ್ಯ ದಿ.ಮೋನಪ್ಪ ಸಪಲ್ಯ ಅವರ ಮನೆಯಲ್ಲಿ ಸುಬ್ಬನ ವಾಸ ಮತ್ತು ಹಾರೈಕೆ ಯಾಗಿತ್ತು.
ಬಸವ ಸುಬ್ಬನ ಸಾವಿನ ಸುದ್ದಿ ತಿಳಿಯುತ್ತಿದಂತೆ ದೈವಸ್ಥಾನದ ಗುತ್ತಿನ ಮನೆಯವರು, ದೈವ ಪಾತ್ರಿಗಳು, ಚಾಕರಿವರ್ಗದವರು, ಹಾಗೂ ಅಪಾರ ಸಂಖ್ಯೆಯಲ್ಲಿ ಊರಿನ ಗ್ರಾಮಸ್ಥರು ಬಂದು ಅಂತಿಮ ದರ್ಶನ ಸಲ್ಲಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...