Friday, June 27, 2025

ಅಪ್ರಾಪ್ತ ಬಾಲಕಿಗೆ ದೌರ್ಜನ್ಯ: ಭಜರಂಗದಳ ಖಂಡನೆ

ವಿಟ್ಲ: ಮೊಬೈಲ್ ಅಂಗಡಿಗೆ ಹಾಡು ಹಾಕಲು ತೆರಳಿದ್ದ ಅನ್ಯಧರ್ಮದ ಅಪ್ರಾಪ್ತ ಬಾಲಕಿ ಮೇಲೆ ಅಂಗಡಿ ಮಾಲಕ ಮೈ ಮೇಲೆ ಕೈ ಹಾಕಿ ಲೈಂಗಿಕ ದೌರ್ಜನ್ಯ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆ ಬಗ್ಗೆ ವಿಟ್ಲ ಪ್ರಖಂಡ ಬಜರಂಗದಳದ ಸಂಚಾಲಕ ಅಕ್ಷಯ್ ರಜಪೂತ್ ಕಲ್ಲಡ್ಕ ಅವರು ಘಟನೆಯನ್ನು ಖಂಡಿಸಿದ್ದು, ಇಂತಹ ಹೀನ ಕೃತ್ಯವೆಸಗಿದ ಸಲಾಂ ತನ್ನ ವಿರುದ್ಧ ಪ್ರಕರಣ ದಾಖಲಾಗಿರುವುದು ತಿಳಿದಂತೆ ಇದೀಗ ತಲೆ ಮರೆಸಿಕೊಂಡಿದ್ದಾನೆ. ಒಂದು ವೇಳೆ ಪೊಲೀಸ್ ಅಧಿಕಾರಿಗಳು ಈತನನ್ನು ಬಂಧಿಸುವ ಮುನ್ನ ಬಜರಂಗದಳ ಕಾರ್ಯಕರ್ತರ ಕೈಗೆ ಸಿಕ್ಕಿದಲ್ಲಿ ಆತನ ತಲೆ ಬೋಳಿಸಿ ಹಂದಿ ಮೇಲೆ ಕುಳ್ಳಿರಿಸಿ ಮಾಣಿ ಪೇಟೆಯಲ್ಲಿ ಮೆರವಣಿಗೆ ನಡೆಸಲಾಗುವುದು. ಇದಕ್ಕಾಗಿ ನಮಗೆ ಗಲ್ಲು ಶಿಕ್ಷೆ ವಿಧಿಸಿದರೂ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ . ಯಾವುದೇ ಬಾಲಕಿಯ ಮೇಲಾದ ದೌರ್ಜನ್ಯ ನಮ್ಮ ಮನೆ ಮಗಳಿಗೆ ಆದಂತೆ. ಇದರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಸಾಗಲಿದೆ. ಪೊಲೀಸ್ ಅಧಿಕಾರಿಗಳು ಸಲಾಂ ಎಂಬಾತನನ್ನು ಶೀಘ್ರವಾಗಿ ಬಂಧಿಸದಿದ್ದಲ್ಲಿ ಬಜರಂಗದಳ ಹಾಗೂ ಮತ್ತಿತರ ಹಿಂದೂ ಪರ ಸಂಘಟನೆಗಳು ಒಗ್ಗಟ್ಟಾಗಿ ಮಾಣಿ ನಗರದ ಸಂಪೂರ್ಣ ಬಂದ್ ಗೆ ಕರೆ ನೀಡಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...