Friday, July 11, 2025

ಕನ್ಯಾನ: ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರೀ ಭಾಗವತ ಸಪ್ತಾಹ ಸಮಾಪನ

ವಿಟ್ಲ: ಒಂದು ಸ್ಪಷ್ಟ ಉದ್ದೇಶದಿಂದ ಭಗವಂತ ನಮಗೆ ಜನ್ಮ ನೀಡಿ ಕಳುಹಿಸಿದ್ದು, ನಾವು ಮಾಡಬೇಕಾದ ಕರ್ತವ್ಯವದಿಂದ ವಿಮುಖವಾಗಬಾರದು.
ನಿಯಮಬದ್ಧವಾದ ಸುಂದರ ಬದುಕಿನ ಸೂತ್ರವನ್ನು ಶ್ರೀ ಭಾಗವತ ಅತ್ಯಂತ ಸೂಚ್ಯವಾಗಿ ತಿಳಿಸುತ್ತದೆ ಎಂದು ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರೀ ಮಹಾಬಲ ಸ್ವಾಮೀಜಿ ನುಡಿದರು.
ಅವರು ಶ್ರೀ ಕ್ಷೇತ್ರದಲ್ಲಿ ನಡೆದ ಶ್ರೀ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮದ ಸಮಾಪನದಲ್ಲಿ ಆಶೀರ್ವಚನ ನೀಡಿದರು.
ಶ್ರೀ ಭಾಗವತದ ಪ್ರವಚನಕಾರರಾಗಿ ಭಾಗವಹಿಸಿದ ಹಿರಿಯ ಧಾರ್ಮಿಕ ಚಿಂತಕ ಕೆಯ್ಯೂರು ನಾರಾಯಣ ಭಟ್ ಶ್ರೀ ಭಾಗವತವನ್ನು ಶ್ರವಣ ಮಾಡುವುದರೊಂದಿಗೆ ಅದರ ಒಳತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಕರೋಪಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಘ್ನೇಶ್ವರ ಭಟ್ ಅನೆಯಾಲ, ಪತ್ರಕರ್ತ ವಿಷ್ಣುಗುಪ್ತ ಪುಣಚ ಭಾಗವಹಿಸಿದ್ದರು.
ಶ್ರೀ ಮಾತಾ ಮಾತೃ ಸೇವಾ ಸಮಿತಿಯ ಲಲಿತ, ನೋವೆಲ್ ಡಿಸೋಜ, ಸವಿತಾ ಅನಿಸಿಕೆ ವ್ಯಕ್ತಪಡಿಸಿದರು. ನಾಗರಾಜ ಕಣಿಯೂರು, ನವೀನ್, ದೀಕ್ಷಿತ್, ಶ್ರೀ ಮಾತಾ ಮಹಿಳಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕ ಚಂದ್ರಶೇಖರ್ ಕಣಿಯೂರು ಸ್ವಾಗತಿಸಿದರು. ರೇಣುಕಾ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...