Friday, June 27, 2025

ಕನ್ಯಾನ: ದೇಶೀ ಮತ್ತು ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಮಾಹಿತಿ ಶಿಬಿರ

ವಿಟ್ಲ: ಜನಸ್ನೇಹಿಯಾಗಿ ಅಧಿಕಾರಿಗಳು ಕೆಲಸ ನಿರ್ವಹಿಸಿದಾಗ ಇಲಾಖೆ ಮುಂಚೂಣಿಗೆ ಬರುತ್ತದೆ. ಸರಕಾರದ ನಾನಾ ಇಲಾಖೆಗಳು ರೈತರಿಗೆ ನೀಡುವ ಸವಲತ್ತುಗಳನ್ನು ಮಾಹಿತಿ ನೀಡುವ ಕಾರ್ಯವಾಗಬೇಕು. ರೈತರು ಹೈನುಗಾರಿಕೆಯಲ್ಲಿ ಪಡುವ ಕಷ್ಟಕ್ಕೆ ಪೆÇ್ರೀತ್ಸಾಹ ನೀಡುವ ಕಾರ್ಯವಾಗಬೇಕು. ಪಶು ಇಲಾಖೆಗೆ 5 ಸೆಂಟ್ಸ್ ಜಾಗ ಮಂಜೂರಾಗಿದ್ದು, ಹೊಸ ಕಟ್ಪಡಕ್ಕೆ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ. ಎಸ್. ಮಹಮ್ಮದ್ ಹೇಳಿದರು.
ಅವರು ಮಂಗಳವಾರ ಕನ್ಯಾನ ಭಾರತ ಸೇವಾಶ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾ ಪಂಚಾಯಿತಿ, ಪಶು ಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವಿಟ್ಲ, ಕನ್ಯಾನ ಹಾಗೂ ಕರೋಪಾಡಿ ಗ್ರಾಮ ಪಂಚಾಯಿತಿ, ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘ, ಕರೋಪಾಡಿ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘ, ಒಡಿಯೂರು ಶ್ರೀ ಗುರುದೇವ ಚಾರಿಟೇಬಲ್ ಟ್ರಸ್ಟ್, ಕನ್ಯಾನ ಭಾರತ ಸೇವಾಶ್ರಮದ ಸಂಯುಕ್ತ ಆಶ್ರಯದಲ್ಲಿ ನಡೆದ ದೇಶೀ ಮತ್ತು ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಹಾಗೂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ಯಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಕಿ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಜಯರಾಜ್ ಎಸ್. ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯಿತಿ ಸದಸ್ಯರಾದ ಉಸ್ಮಾನ್ ಹಾಜಿ ಕರೋಪಾಡಿ, ವೆಂಕಟೇಶ್ ಕುಮಾರ್ ಭಟ್ ಬದಿಕೋಡಿ ಬಹುಮಾನ ವಿತರಿಸಿದರು. 48ಕ್ಕೂ ಅಧಿಕ ಹೆಣ್ಣು ಕರುಗಳು ಪ್ರದರ್ಶನದಲ್ಲಿ ಭಾಗವಹಿಸಿದವು.
ಬಂಟ್ವಾಳ ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಹೆನ್ರಿ ಲಸ್ರಾದೊ, ದ. ಕ. ಹಾಲು ಒಕ್ಕೂಟ ಪುತ್ತೂರು ವಿಭಾಗ ಉಪವ್ಯವಸ್ಥಾಕ ಡಾ. ಸತೀಶ್ ರಾವ್, ಮಂಗಳೂರು ದ. ಕ. ಹಾಲು ಒಕ್ಕೂಟ ಉಪವ್ಯವಸ್ಥಾಪಕ ಪ್ರಭಾಕರ, ಕನ್ಯಾನ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಎಂ. ಗಣಪತಿ ಭಟ್, ಕರೋಪಾಡಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷೆ ಗಾಯತ್ರಿ ವಿ. ಭಟ್, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ, ಕನ್ಯಾನ ಭಾರತ ಸೇವಾಶ್ರಮದ ಕಾರ್ಯದರ್ಶಿ ಈಶ್ವರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ವಿಟ್ಲ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಸುರೇಶ್ ಭಟ್ ಸ್ವಾಗತಿಸಿದರು. ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ ಶೆಟ್ಟಿ ಬಹುಮಾನಿತರ ಪಟ್ಟಿ ಓದಿದರು. ಜಾನುವಾರು ಅಧಿಕಾರಿ ಕಾಶಿಮಠ ಈಶ್ವರ ಭಟ್ ವಂದಿಸಿದರು. ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಶ್ರೀಮಂದಾರ ಜೈನ್ ಕಾರ್ಯಕ್ರಮ ನಿರೂಪಿದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...