Thursday, February 13, 2025

ಕಾರು ಹೊಂಡಕ್ಕೆ ಬಿದ್ದು ಒರ್ವ ಮ್ರತಪಟ್ಟು ಐವರು ಗಂಭೀರ ಗಾಯ

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡ ಕ್ಕೆ ಬಿದ್ದು ಒರ್ವ ಮ್ರತಪಟ್ಟು ಒಂದೇ ಮನೆಯ ಐವರು ಗಂಬೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಮುಖ್ಯ ವ್ರತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರು ಬಜಾಲ್ ನಿವಾಸಿ ಕೆ.ಎಮ್. ಶರೀಫ್ ಮ್ರತಪಟ್ಟಿದ್ದಾರೆ. ಶರೀಫ್ ಅವರ ಪತ್ನಿ ಜಮೀಲಾ, ಮಕ್ಕಳಾದ ಸಫ್ ನಾಜ್, ಸಫಾ, ಸಫ್ ವಾನ್, ಸಫ್ರೀನಾ ಅವರು ಗಂಭೀರ ಸ್ವರೂಪದ ಗಾಯಗಳಾಗಿ ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ.
ಒಂದೇ ಮನೆಯ ಸದಸ್ಯರು ಪುತ್ತೂರು ಸಂಬಂಧಿಕರ ಗ್ರಹಪ್ರವೇಶ ಕಾರ್ಯಕ್ರಮ ಕ್ಕೆ ತೆರಳಿ , ಕಾರ್ಯಕ್ರಮ ಮುಗಿಸಿ ವಾಪಾಸು ಮಂಗಳೂರು ಕಡೆ ಗೆ ಹೋಗುವ ವೇಳೆ ಬಿಸಿರೋಡಿನ ಲ್ಲಿ ನಡೆದಿದೆ.ಮ್ರತ ಶರೀಫ್ ಅವರ ಹಿರಿ ಮಗ ಸಫ್ವಾನ್ ಅವರು ಚಾಲನೆ ಮಾಡುತ್ತಿದ್ದರು, ಪುತ್ತೂರಿನಿಂದ ಕಾರ್ಯ ಮುಗಿಸಿ ಮನೆಗೆ ತೆರಳುವ ವೇಳೆ ಅತೀ ವೇಗದ ಚಾಲನೆಯಾ ಅಥವಾ ಒವರ್ ಟೇಕ್ ಮಾಡಿದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿಸಿರೋಡಿನ ಲ್ಲಿ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ ಯಾ ಎನ್ನುವುದು ತನಿಖೆಯ ಬಳಿಕ ಗೊತ್ತಾಗಬೇಕಾಗಿದೆ.‌
ಘಟನಾ ಸ್ಥಳ ಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಮಂಜುನಾಥ, ಎ.ಎಸ್.ಐ.ಕುಟ್ಟಿ, ಸಿಬ್ಬಂದಿ ಗಳಾದ ಮೋನಪ್ಪ, ಕ್ರಷ್ಣ ಬೇಟಿ ನೀಡಿ ಮುಂದಿನ ‌ಕ್ರಮಕೈಗೊಂಡಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...