Sunday, June 29, 2025

ಕಾರು ಹೊಂಡಕ್ಕೆ ಬಿದ್ದು ಒರ್ವ ಮ್ರತಪಟ್ಟು ಐವರು ಗಂಭೀರ ಗಾಯ

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡ ಕ್ಕೆ ಬಿದ್ದು ಒರ್ವ ಮ್ರತಪಟ್ಟು ಒಂದೇ ಮನೆಯ ಐವರು ಗಂಬೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಮುಖ್ಯ ವ್ರತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರು ಬಜಾಲ್ ನಿವಾಸಿ ಕೆ.ಎಮ್. ಶರೀಫ್ ಮ್ರತಪಟ್ಟಿದ್ದಾರೆ. ಶರೀಫ್ ಅವರ ಪತ್ನಿ ಜಮೀಲಾ, ಮಕ್ಕಳಾದ ಸಫ್ ನಾಜ್, ಸಫಾ, ಸಫ್ ವಾನ್, ಸಫ್ರೀನಾ ಅವರು ಗಂಭೀರ ಸ್ವರೂಪದ ಗಾಯಗಳಾಗಿ ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ.
ಒಂದೇ ಮನೆಯ ಸದಸ್ಯರು ಪುತ್ತೂರು ಸಂಬಂಧಿಕರ ಗ್ರಹಪ್ರವೇಶ ಕಾರ್ಯಕ್ರಮ ಕ್ಕೆ ತೆರಳಿ , ಕಾರ್ಯಕ್ರಮ ಮುಗಿಸಿ ವಾಪಾಸು ಮಂಗಳೂರು ಕಡೆ ಗೆ ಹೋಗುವ ವೇಳೆ ಬಿಸಿರೋಡಿನ ಲ್ಲಿ ನಡೆದಿದೆ.ಮ್ರತ ಶರೀಫ್ ಅವರ ಹಿರಿ ಮಗ ಸಫ್ವಾನ್ ಅವರು ಚಾಲನೆ ಮಾಡುತ್ತಿದ್ದರು, ಪುತ್ತೂರಿನಿಂದ ಕಾರ್ಯ ಮುಗಿಸಿ ಮನೆಗೆ ತೆರಳುವ ವೇಳೆ ಅತೀ ವೇಗದ ಚಾಲನೆಯಾ ಅಥವಾ ಒವರ್ ಟೇಕ್ ಮಾಡಿದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿಸಿರೋಡಿನ ಲ್ಲಿ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ ಯಾ ಎನ್ನುವುದು ತನಿಖೆಯ ಬಳಿಕ ಗೊತ್ತಾಗಬೇಕಾಗಿದೆ.‌
ಘಟನಾ ಸ್ಥಳ ಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಮಂಜುನಾಥ, ಎ.ಎಸ್.ಐ.ಕುಟ್ಟಿ, ಸಿಬ್ಬಂದಿ ಗಳಾದ ಮೋನಪ್ಪ, ಕ್ರಷ್ಣ ಬೇಟಿ ನೀಡಿ ಮುಂದಿನ ‌ಕ್ರಮಕೈಗೊಂಡಿದ್ದಾರೆ.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...