Monday, January 26, 2026

ಕರಾಟೆ ವಿಜೇತ ಸಾಧಕರಿಗೆ ಅಭಿನಂದನಾ ಸಮಾರಂಭ

ಬಂಟ್ವಾಳ: ಕಾನ್ ರಿಯೂ ಆರ್.ವಿ. ಟೈಗರ್ಸ್ ಮಾರ್ಷಲ್ ಆರ್ಟ್ ಕರಾಟೆ ಡೋ ಕರ್ನಾಟಕ ಇದರ ವತಿಯಿಂದ ಕರಾಟೆಯಲ್ಲಿ ವಿಜೇತ ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೆಶ್ವರೀ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ನಾವೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜೀವನ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕರಾಟೆ ಆತ್ಮರಕ್ಷಣೆಗೆ ಅಗತ್ಯ, ದೈಹಿಕ ಶಕ್ತಿ ನೀಡುವುದಲ್ಲದೆ ಮಾನಸಿಕ ಶಕ್ತಿಯನ್ನು ನೀಡುತ್ತದೆ ಎಂದರು.


ಕರಾಟೆ ತರಬೇತುದಾರ ಸೆನ್ಸಾಯ್ ವಸಂತ ಕೆ. ಬಂಗೇರ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಅವರು ಮಾತನಾಡಿ ಕರಾಟೆ ವಿದ್ಯೆ ಗೊತ್ತಿದ್ದರೆ ಮಾತ್ರ ಸಾಲದು ಅದರಲ್ಲಿ ಸಂಪೂರ್ಣ ಪಳಗಬೇಕು. ತಾಳ್ಮೆ, ಪರಿಶ್ರಮದಿಂದ ಗೆಲುವು ಸಾಧಿಸಲು ಸಾಧ್ಯವಿದೆ, ಪೋಷಕರ ಸಹಕಾರದಿಂದಾಗಿ ಇಂತಹ ಸಾಧನೆ ಮಾಡಲು ಸಾದ್ಯವಾಗಿದೆ ಎಂದು ತಿಳಿಸಿದರು. ವೈದ್ಯೆ ಡಾ. ಜಯಪ್ರದ, ನಾಟಿ ವೈದ್ಯ ವಿಶ್ವನಾಥ ಪೂಜಾರಿ ಕೂರಿಯಾಳ ಉಪಸ್ಥಿತರಿದ್ದರು.
ಹಿಲರಿ ಲೋಬೋ ಹಾಗೂ ಸವಿತಾ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಸಂಸ್ಥೆಯ 63 ಮಂದಿ ಹಾಗೂ ರಾಜ್ಯಮಟ್ಟದ ಸ್ಪರ್ಧೆಯಲ್ಲಿ 31 ವಿದ್ಯಾರ್ಥಿಗಳು ಬಹುಮಾನ ಗೆದ್ದುಕೊಂಡಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...