Thursday, January 29, 2026

ಫೆಬ್ರವರಿ 11 ರಿಂದ 25: ಕರಾವಳಿ ಕಲೋತ್ಸವ 2021

ಬಂಟ್ವಾಳ: ಕರಾವಳಿ ಕಲೋತ್ಸವ 2021 ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಇದರ ವರ್ಷದ ಕಲಾ ಯೋಜನೆಯ ಬಗ್ಗೆ ಈ ವರ್ಷ ಹಮ್ಮಿಕೊಂಡ ನವ ಯೋಚನೆಯ ನವ ಚಿಂತನೆಯ “ಕೃಷಿ ಮೇಳ”ದ ಬಗ್ಗೆ ಚಿಂತನ ಮಂಥನ ಇಂದು ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಫೆಬ್ರವರಿ 11 ರಿಂದ 25 ರ ತನಕ ಕೃಷಿ ಮೇಳ, ತುಳು ನಾಟಕ ಸ್ಪರ್ಧೆ, ಚೆಂಡೆ, ಧಪ್, ಡ್ಯಾನ್ಸ್ ಸ್ಪರ್ಧೆ, ಅಮ್ಯೂಸ್ಮೆಂಟ್, ಇತರ ಸ್ಟಾಲ್ ಗಳ ವರ್ಣಾತಿತ ಕಾರ್ಯಕ್ರಮಗಳು ಬಿ.ಸಿ.ರೋಡಿನ “ಗೋಲ್ಡನ್ ಪಾರ್ಕ್ ಮೈದಾನ” ದಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.
ಮೊದಲ ಮೂರು ದಿನ ಆಕರ್ಷಕ, ಕೃಷಿ ಅನಭವದಲ್ಲಿ ಯವಕರಿಗೆ, ಮಹಿಳೆಯರಿಗೆ, ಜನತೆಗೆ ಕೃಷಿ ಮಾಹಿತಿ ನೀಡುವ ವಿಚಾರಗೋಷ್ಠಿ, ಅನುಭವ, ಸ್ಪರ್ಧೆ, ಮೂಲಕ “ವನಸಿರಿ” “ಬನಸಿರಿ” “ಕೃಷಿಸಿರಿ” “ತಾಂತ್ರಿಕ ಸಿರಿ” ಮೂಲಕ ಕೃಷಿ ವಿಚಾರ ತಿಳಿಸುವ ಬಗ್ಗೆ ಕಾರ್ಯಕ್ರಮಕ್ಕಾಗಿ ಸದಾನಂದ ಶೆಟ್ಟಿ ಸೊರ್ನಾಡು ಇವರನ್ನು ಪ್ರಧಾನ ಸಂಚಾಲಕರಾಗಿ ನೇಮಿಸಲಾಯಿತು. ಅವರಿಗೆ ಜವಾಬ್ದಾರಿ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷರಾಗಿ ಸುದರ್ಶನ್ ಜೈನ್, ಸಂಚಾಲಕ ಮೊಹನದಾಸ್ ಕೊಟ್ಟಾರಿ ಮುನ್ನೂರು, ಗೌರವ ಸಲಹೆಗಾರರಾದ ಅಶೊಕ್ ಶೆಟ್ಟಿ ಸರಪಾಡಿ, ಜಯಾನಂದ ಪೆರಾಜೆ, ಸೇಷಪ್ಪ ಮಾಸ್ಟರ್, ದಿನೇಶ್ ಶೆಟ್ಟಿ ಪಂಜಿಕಲ್ಲು, ಎಚ್ಕೆ ನಯನಾಡು, ರತ್ನ ದೇವ್ ಪುಂಜಾಲಕಟ್ಟೆ, ಜೆನಿತ್ ಜೈನ್, ಮಹಮ್ಮದ್ ನಂದಾವರ, ಆಶ್ಲೇಷ್ ಪೋಲೀಸ್ ಲೈನ್ ಉಪಸ್ಥಿತಿಯಿದ್ದರು.

ಸಮಿತಿಯ ಸೌಮ್ಯ ಯಶವಂತ್ ಭಂಡಾರಿಬೆಟ್ಟು ಸ್ವಾಗತಿಸಿ, ವಂದಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...