Thursday, January 29, 2026

ಕರೆಂಕಿ ಬ್ರಹ್ಮಕಲಶೋತ್ಸವ: ಹಸಿರು ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಹಸಿರು ಹೊರೆಕಾಣಿಕೆ ಮೆರವಣಿಗೆಯು ಶುಕ್ರವಾರ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಕರೆಂಕಿ ಕ್ಷೇತ್ರಕ್ಕೆ ಸಾಗಿತು.

ಕೇರಳದ ಚೆಂಡೆ ವಾಹನ, ಕಲಶ ಹಿಡಿದ ಮಹಿಳೆಯರು, ವಿವಿಧ ಭಜನಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಸುಮಾರು ೬೦ಕ್ಕೂ ಅಧಿಕ ವಾಹನಗಳ ಮೂಲಕ ಹೊರೆಕಾಣಿಕೆಯನ್ನು ಸಾಗಿಸಲಾಯಿತು. ಭಕ್ತರು ನೀಡಿದ ಸೀಯಾಳ, ತೆಂಗಿನಕಾಯಿ, ಅಕ್ಕಿ, ಹಿಂಗಾರ, ಬಾಳೆಗೊನೆ, ಅಡಿಕೆ ಮೊದಲಾದ ಸುವಸ್ತುಗಳನ್ನು ಸಮರ್ಪಿಸಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರು ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಹೊರೆಕಾಣಿಕೆಯ ಸಮಿತಿಯ ಸಂಚಾಲಕ ರಾಮದಾಸ್ ಬಂಟ್ವಾಳ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಧರ್ಣಪ್ಪ ಪೂಜಾರಿ ರಾಮನಗರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಾಜೇಶ್ ಪೂಜಾರಿ ಕೊಂಗ್ರಬೆಟ್ಟು, ರಾಮಚಂದ್ರ ಶೆಟ್ಟಿ ದಂಡೆ, ಉಪಾಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬ್ರಬೈಲು, ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಕರೆಂಕಿ, ಉಪಾಧ್ಯಕ್ಷ ಪೂವಪ್ಪ ಮೆಂಡನ್ ಕರೆಂಕಿ, ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಹಿಂಜಾವೇ ಗೌರವಾಧ್ಯಕ್ಷ ಚಿದಾನಂದ, ವಿವಿಧ ಸಮಿತಿಗಳ ಪ್ರಮುಖರಾದ ಮನ್ಮಥ್ ಜೆ.ಶೆಟ್ಟಿ, ರಾಜೇಶ್ ನಾಯ್ಕ್ ನೆಕ್ಕರೆ, ಕೃಷ್ಣ ಟಿ.ಕನಪಾದೆ, ಪುಷ್ಪರಾಜ್ ಜಕ್ರಿಬೆಟ್ಟು, ಜಯರಾಮ ರಾಮನಗರ, ವಿಲಾಸಿನಿ ಶಾಂತವೀರ ಪೂಜಾರಿ, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು ಪಾಲ್ಗೊಂಡಿದ್ದರು.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...