Thursday, June 26, 2025

ಕಾರಿಂಜ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ: ಇನ್ನುಳಿದ ಇಬ್ಬರಿಗಾಗಿ ಶೋಧ

ಬಂಟ್ವಾಳ: ಕಾರಿಂಜ ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಚಪ್ಪಲಿ ಹಾಕಿಕೊಂಡು ಹೋಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತ್ರತ್ವದ ಪೋಲೀಸ್ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿ ಗಳನ್ನು ವಶಕ್ಕೆ ಪಡೆದುಕೊಂಡು ಈ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಘಟನೆಯ ಬಗ್ಗೆ ತಪ್ಪೊಪ್ಪುಕೊಂಡಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.

ಮಾಸ್ತಿಕಟ್ಟೆ ಉಲ್ಲಾಳ ಮಂಗಳೂರು ನಿವಾಸಿ U K ಬಶೀರ್ ಅವರ ಮಗ ಬುಶೇರ್ ರೆಹಮಾನ (20)

ಮುಕ್ಕಚ್ಚೇರಿ ಮನೆ ಉಳ್ಳಾಲ ಮಂಗಳೂರು ನಿವಾಸಿ ಅಬ್ದುಲ್ ಖಾದರ್ ಅವರ ಮಗ ಇಸ್ಮಾಯಿಲ್ ಅರ್ಹ ಮಾಜ್

ಹಳೆಕೋಟೆ ಮನೆ ಉಲ್ಲಾಳ ಮಂಗಳೂರು ನಿವಾಸಿ ಉಮ್ಮರ್ ಫಾರೂಖ್ ಅವರ ಮಗ ಮಹಮ್ಮದ್ ತಾನಿಶ್ (19)

ತನ್ವೀರ್ ಕ್ವಾಟೇಜ್ ಬಬ್ಬುಕಟ್ಟೆ ಪೆರ್ಮನ್ನೂರು ಮಂಗಳೂರು ನಿವಾಸಿ ಬದ್ರುದ್ದೀನ್ ಅವರ ಮಗ

ಮೊಹಮ್ಮದ್ ರಶಾದ್(19) ಬಂಧಿತ ಆರೋಪಿಗಳು.

ಆರೋಪಿಗಳು ಅಕ್ರಮವಾಗಿ ದೇವಳದ ಒಳಗೆ ಚಪ್ಪಲಿ ಹಾಕಿ ಪ್ರವೇಶ ಮಾಡಿ ಹಿಂಧೂಗಳ ಭಾವನೆಗಳಿಗೆ ದಕ್ಕೆ ತಂದಿದ್ದು. ಅಲ್ಲದೆ ಅದನ್ನು ದೇವಸ್ಥಾನದಲ್ಲಿ ಚಪ್ಪಲಿ ಹಾಕಿ ನಡೆದಾಡುವ ವಿಡಿಯೋ ವನ್ನು ಸಾಮಾಜಿಕ ಜಾಲತಾಣ ದಲ್ಲಿ ಹಾಕಿ ವಿಜ್ರಂಭಿಸಿ ಹಿಂಧುಗಳ ಧಾರ್ಮಿಕ ನಂಬಿಕೆಗೂ ಧಕೆ ತಂದಿದ್ದು ಇದನ್ನು ದೇವಸ್ಥಾನದ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸಿದ್ದು ಆರೊಪಿಗಳನ್ನು ಶೀಘ್ರ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿ ಪುಂಜಾಲಕಟ್ಟೆ ಠಾಣೆಗೆ ಮನವಿ ನೀಡಿತ್ತು.

ಘಟನೆ ಗೆ ಸಂಬಂಧಿಸಿದಂತೆ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಪೋಲೀಸರು ನಾಲ್ವರು ಆರೋಪಿಗಳನ್ನುಬಂಧಿಸಿದ್ದಾರೆ.

.ಇನ್ನುಳಿದಂತೆ ಇಬ್ಬರು ಆರೋಪಿಗಳು ಈ ಘಟನೆಯಲ್ಲಿ ಇದ್ದ ಬಗ್ಗೆ ವಿಡಿಯೋ ದಲ್ಲಿ ಸೆರೆ ಯಾಗಿ ದ್ದು ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...