Thursday, February 13, 2025

ಸದಸ್ಯತ್ವದಿಂದ ಬಲಿಷ್ಠ ಸಂಘಟನೆ: ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಭಟ್

ಬಂಟ್ವಾಳ: ಬಿಜೆಪಿ ಸಂಘಟನೆ ಮತ್ತು ಸದಸ್ಯತ್ವ ಅಭಿಯಾನದ ಉದ್ಘಾಟನಾ ಸಭೆ ಇತ್ತೀಚಿಗೆ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಕರಿಂಕ ಎಂಬಲ್ಲಿ ನಡೆಯಿತು. ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಲೋಚನ ಭಟ್ ಅವರು “ಸದಸ್ಯತ್ವ ಜಾಸ್ತಿ ಆದಂತೆ ಸಂಘಟನಾ ಶಕ್ತಿ ಇಮ್ಮಡಿ ಆಗುತ್ತದೆ. ಪಕ್ಷ ಸುದೃಡವಾಗಿ ಬೆಳೆಯತ್ತದೆ.ವ್ಯಕ್ತಿಗಿಂತ ಪಕ್ಷ ಮುಖ್ಯ ಪಕ್ಷಕ್ಕಿತ ದೇಶ ಮುಖ್ಯ ಎಂಬ ಧೋರಣೆಯಂತೆ ವ್ಯಕ್ತಿಗೆ ಪ್ರಾಮುಖ್ಯತೆ ನೀಡದೇ ಪಕ್ಷಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ ಪಕ್ಷ ಸಂಘಟಿಸುವಂತೆ” ಕರೆ ನೀಡಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚೆನ್ನಪ್ಪ ಕೋಟ್ಯಾನ್ ಮಾತಾನಾಡಿ “ಅನಂತಾಡಿಯಲ್ಲಿ ಪಕ್ಷ ಬಲಿಷ್ಟವಾಗಿದೆ,ಸದಸ್ಯತ್ವ ಅಭಿಯಾನವನ್ನು ಮನೆ ಮನೆಗೂ ಪಸರಿಸಿ ಪಕ್ಷವನ್ನು ಇನ್ನಷ್ಟು ಗಟ್ಟಿ ಗೊಳಿಸಲು ಕಾರ್ಯಕರ್ತರು ಶ್ರಮ ವಹಿಸಬೇಕು” ಎಂದರು. ಅಲ್ಲದೇ ಸದಸ್ಯತ್ವ ಅಭಿಯಾನದ ಕುರಿತು ಪೂರ್ಣ ಮಾಹಿತಿ ನೀಡಿದರು.

ಎಸ್ ಸಿ ಮೋರ್ಚದ ಜಿಲ್ಲಾದ್ಯಕ್ಷ ದಿನೇಶ್ ಅಮ್ಟೂರು ಮಾತಾನಾಡಿ”ಕರಿಂಕದ ಈ ದೊಡ್ಡ ಸಭೆ ಮುಂದಿನ ದಿಗ್ವಿಜಯದ ದಿಕ್ಸೂಚಿಯಾಗಿದೆ. ಬಿಜೆಪಿ ಪರಿಸರ ರಕ್ಷಣೆಗೂ ಶಾಂತಿ ಸಾಮರಸ್ಯದ ಆಡಳಿತಕ್ಕೂ ಕಟಿಬದ್ದವಾಗಿದೆ ಎಂದರು.

ಗ್ರಾಮ ಪಂಚಾಯತ್ ಸಮಿತಿ ಅದ್ಯಕ್ಷ ಚಂದ್ರಶೇಖರ್ ಕರ್ಕೇರ ಸಭೆಯ ಅದ್ಯಕ್ಷತೆ ವಹಿಸಿದ್ದು ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್, ಪಂಚಾಯತ್ ಅದ್ಯಕ್ಷ ಸನತ್ ಕುಮಾರ್ ರೈ, ಉಪಾದ್ಯಕ್ಷೆ ಕವಿತಾ ಉಮೇಶ್,ಪಂಚಾಯತ್ ಸದಸ್ಯರಾದ ಪುರಂದರ ಗೌಡ,ವಸಂತಿ ನಾಯ್ಕ್,ಸುಮಿತ್ರ ಕರ್ಕೇರ ಉಪಸ್ಥಿತರಿದ್ದರು.

ಕ್ಷೇತ್ರ ಸಮಿತಿ ಸದಸ್ಯ ನಾಗೇಶ್ ಭಂಡಾರಿ ಕರಿಂಕ ಸ್ವಾಗತಿಸಿ ವಂದಿಸಿದರು.ಬಿಜೆಪಿ ಗ್ರಾಮ ಪಂಚಾಯತ್ ಸಮಿತಿ ಪ್ರಧಾನ ಕಾರ್ಯದರ್ಶಿ ಕಾರ್ಯಕ್ರಮವನ್ನು ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...