ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.


ಬಂಟ್ವಾಳ ತಾಲೂಕು ಕರಿಯಂಗಳ ಸಮೀಪದ ಪು0ಚಮೆ ಯಲ್ಲಿ ಸರ್ವೇ ನಂಬರ್ 152/2A2 -0.20 ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ (ಇಸ್ಲಾಮಿಕ್ ಎಜುಕೇಶನ್ ಸೆಂಟರ್) ಮಾಡಲು ಮುಂದಾಗಿದ್ದಾರೆ.
ಕರಿಯಂಗಳ ಗ್ರಾಮ ಪಂಚಾಯಿತಿ ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಿ ಯಾವುದೇ ಅನುಮತಿಯೇ ಇಲ್ಲದೆ ಮಸೀದಿ ನಿರ್ಮಿಸುತ್ತಿದ್ದಾರೆ ಎಂಬ ಆರೋಪವನ್ನು ಗ್ರಾಮಸ್ಥರು ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ಗ್ರಾಮಸ್ಥರು ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ದೂರು ನೀಡಿದ್ದರು.ಜೊತೆಗೆ ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್ ಅವರಿಗೂ ಮನವಿ ಮಾಡಲಾಗಿದೆ.
ನೀಡಿದ ದೂರಿಗೆ ಕರಿಯಂಗಳ ಗ್ರಾಮ ಪಂಚಾಯಿತಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಸ್ಥಳೀಯರಿಂದ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಅದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.
ಈ ಸಮಯದಲ್ಲಿ ಗ್ರಾಮದಪ್ರಮುಖರಾದ ವೆಂಕಟೇಶ್ ನಾವಡ ಪೊಳಲಿ , ಯಶವಂತ್ ಪೊಳಲಿ , ರೋಶನ್ ಅಮೀನ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.