Wednesday, June 25, 2025

ಕರಿಯಂಗಳ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಪಾಟಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕರಿಯಂಗಳ ಗ್ರಾಮಕ್ಕೆ ಒಟ್ಟು 3.50 ಕೋಟಿಯಷ್ಟು ಅನುದಾನವನ್ನು ನೀಡಿದ್ದು, ಇದರಲ್ಲಿ 2 ಕೋಟಿಯ ಕೆಲಸ ನಡೆದಿದ್ದು, ಈಗಾಗಲೇ ಉದ್ಫಾಟನೆಗೊಂಡಿದೆ. 1.50 ಕೋಟಿಯ ಕಾಮಗಾರಿಯನ್ನು ಇಂದು ಉದ್ಫಾಟನೆ ಹಾಗೂ ಅಖಿಲೇಶ್ವರ ದೇವಸ್ಥಾನದ ರಸ್ತೆಗೆ ಗುದ್ದಲಿ ಪೂಜೆ ಮಾಡಲಾಯಿತು.

ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ಈ ಗ್ರಾಮಕ್ಕೆ ತಂದು ಗ್ರಾಮದ ಅಭಿವೃದ್ಧಿಗೆ ಶಾಸಕರು ರಾಜೇಶ್ ನಾಯ್ಕ್ ಹೇಳಿದರು. ನಂತರ ಅಖಿಲೇಶ್ವರದ ದೇವಸ್ಥಾನದ ರಸ್ತೆ ಕಾಂಕ್ರಿಟಿಕರಣಕ್ಕೆ ಗುದ್ದಲಿ ಪೂಜೆಯನ್ನು ನೆರೆವೇರಿಸಿದ ಪೊಳಲಿ ರಾಜರಾಜೆಶ್ವರಿ ದೇವಸ್ಥಾನದ ಅರ್ಚಕರು ಹಾಗೂ ಅಖಿಲೇಶ್ವರದ ದೇವಸ್ಥಾನದ ಆಡಳಿತ ಸಮಿತಿಯ ಕಾರ್ಯದರ್ಶಿಯಾದ ರಾಮ್ ಭಟ್‌ವರು ಮಾತನಾಡಿ ಬಹಳ ಹಿಂದಿನಿಂದಲೂ ಅಖಿಲೇಶ್ವರದ ದೇವಸ್ಥಾನದ ಈ ರಸ್ತೆ ಕಾಂಕ್ರೀಟಿಕರಣಗೊಳ್ಳಬೆಂಕು ಎಂದು ಹಲವಾರು ಭಕ್ತರ ಬಯಕೆ ಇತ್ತು. ಭಕ್ತಾಭಿಮಾನಿಗಳು ದೇವಸ್ಥಾನದಕ್ಕೆ ಭೇಟಿ ನೀಡುತ್ತಿದ್ದು, ಜನರ ಅನುಕೂಲಕ್ಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ಯವರು ಈ ರಸ್ತೆಗೆ ಅನುದಾನವನ್ನು ಮಂಜೂರು ಮಾಡಿದ್ದು ನಮ್ಮಗೆಲ್ಲರಿಗೂ ಸಂತೋಷವಾಗಿದೆ. ಶಾಸಕರು ಕ್ಷೇತ್ರದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಇನ್ನಷ್ಟು ಅಭಿವೃದ್ಧಿ ಕಾರ್ಯ ಮಾಡುವ ಶಕ್ತಿ ತಾಯಿ ರಾಜರಾಜೆಶ್ವರಿ ಮತ್ತು ಅಖಿಲೇಶ್ವರದ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಹಾಗೂ ಪೊಳಲಿ ವ್ಯವಸಾಯ ಸೇವಾ ಸಹಕಾರಿಯ ಬ್ಯಾಂಕಿನ ಉಪಾಧ್ಯಕ್ಷ ವೆಂಕಟೇಶ್ ನಾವುಡ, ತಾ.ಪಂ ಸದಸ್ಯ ಯಶವಂತ ಪೂಜಾರಿ ಪೊಳಲಿ, ಪಂ.ಅಧ್ಯಕ್ಷೆ ಚಂದ್ರಾವತಿ, ಗೋಪಾಲ ಬಂಗೇರ, ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯ ಸುಕೇಶ್ ಚೌಟ, ಪಂ. ಸದಸ್ಯ ಲೋಕೇಶ್ ಭರಣಿ, ಕಿಶೋರ್ ಪಲ್ಲಿಪಾಡಿ, ಕುಮಾರ್ ದೇವಾಡಿಗ, ಕಾರ್ತಿಕ್ ಬಳ್ಳಾಲ್ ಅಮ್ಮುಂಜೆ, ಚಂದ್ರಹಾಸ್ ಟೈಲರ್, ರೋಶನ್ ಗರೋಡಿ, ನವೀನ್ ಪೊಳಲಿ ಉಪಸ್ಥಿತರಿದ್ದರು.
ಇಂದು ಉದ್ಫಾಟನೆಗೊಂಡ ಕಾಮಗಾರಿಗಳ ವಿವರ :
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ದ್ವಾರದ ಬಳಿ ಹೈಮಾಸ್ಟ್ ಅಳವಡಿಕೆ – 1.25 ಲಕ್ಷ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ-ಪಲ್ಲಿಪಾಡಿ ರಸ್ತೆ ಮರುಡಾಮರೀಕರಣ – 87 ಲಕ್ಷ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಅಖೀಲೇಶ್ವರ ದೇವಸ್ಥಾನ ರಸ್ತೆ ಅಭಿವೃದ್ಧಿ – 10 ಲಕ್ಷ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕಲ್ಕುಟ ರಸ್ತೆ ಅಭಿವೃದ್ಧಿ – 20 ಲಕ್ಷ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಮಯ್ಯರ ಕೂಟೇಲು ಎಂಬಲ್ಲಿ ಫಲ್ಗುಣಿ ನದಿ ದಂಡೆ ಸಂರಕ್ಷಣಾ ಕಾಮಗಾರಿ – 40 ಲಕ್ಷ

More from the blog

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...