Saturday, July 12, 2025

ವಿವಿಧ ಕಾಮಗಾರಿಗೆ 2.40 ಕೋ.ರೂ.ಮಂಜೂರು: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮರಣೆ ಮತ್ತು ಕರಿಯಂಗಳ ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗಿನ ಸಮಾಲೋಚನಾ ಸಭೆ ಸರ್ವಮಂಗಳ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ಯು.ರಾಜೇಶ್ ನಾಯ್ಕ್ ಅವರು,  ಕರಿಯಂಗಳ ಗ್ರಾಮದ ವಿವಿಧ ಬೇಡಿಕೆಯನ್ನು ಪರಿಗಣಿಸಿ  ಸುಮಾರು 2.40 ಕೋಟಿ ರೂ.ಗೂ ಮಿಕ್ಕಿ ವಿವಿಧ ಕಾಮಗಾರಿಗಳಿಗೆ ಅನುದಾನ ಮಂಜೂರಾತಿ ದೊರೆತಿದೆ ಎಂದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ 3 ಕೊಳವೆ ಬಾವಿಗೆ ಕೊರೆಯಲಾಗಿದೆ.
ಮುಂದಿನ ಅವಧಿಯಲ್ಲಿ ಆದ್ಯತೆ ಮೇರೆಗೆ ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ಒದಗಿಸಲಾಗುವುದು ಎಂದು ಶಾಸಕ ಯು. ರಾಜೇಶ್ ನಾಯ್ಕ್ ಭರವಸೆ ನೀಡಿದರು. ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮಿತಿ ಉಪಾಧ್ಯಕ್ಷ ದೇವಪ್ಪ ಪೂಜಾರಿ, ತಾ.ಪ.ಸದಸ್ಯ ಯಶವಂತ ಪೊಳಲಿ,  ಮಾಜಿ ಸದಸ್ಯ  ವೆಂಕಟೇಶ್ ನಾವಡ,  ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ, ಪಂಚಾಯತ್ ಸಮಿತಿ ಅಧ್ಯಕ್ಷ ಗೋಪಾಲ ಬಂಗೇರ, ಪಂಚಾಯತ್ ಸದಸ್ಯರು,ಕಾರ್ಯಕರ್ತರು ಉಪಸ್ಥಿತರಿದ್ದರು.

 

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...