Monday, January 26, 2026

ತೆಂಗಿನಕಾಯಿ ವ್ಯಾಪಾರ ಕಾರ್ಕಳದ ರೈತರಿಗೆ ಸಹಕಾರಿಯಾಗಲಿದೆ ತೋಟಗಾರಿಕಾ ರೈತರ ಕಂಪೆನಿಯ ಷೇರು ವಿತರಿಸಿ: ಶಾಸಕ ಸುನೀಲ್ ಕುಮಾರ್

ಮುಂಬಯಿ: ಕಾರ್ಕಳ ತೋಟಗಾರಿಕೆ ಉತ್ಪಾದಕ ಕಂಪೆನಿ ನಿಯಮಿತ ಸಂಸ್ಥೆಯ ವತಿಯಿಂದ ಸದಸ್ಯರಿಗೆ ಷೇರು ವಿತರಣಾ ಸಭಾಕಾರ್ಯಕ್ರಮವು ಇಂದಿಲ್ಲಿ ಕಾರ್ಕಳ ನಲ್ಲೂರು ಇಲ್ಲಿನ ಶ್ರೀ ಗಣಪತಿ ಭಜನ ಮಂದಿರದ ಸಭಾಗೃಹದಲ್ಲಿ ಜರಗಿತು. ಕಾರ್ಕಳ ಕ್ಷೇತ್ರದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಷೇರು ವಿತರಿಸಿದರು.

ರೈತರಿಂದ ರೈತರಿಗಾಗಿ ಮೂರು ವರ್ಷಗಳ ಹಿಂದೆ ಹುಟ್ಟಿರುವ ಈ ಕಂಪೆನಿಯು ರೈತರ ಕೃಷಿ ಹಾಗೂ ತೋಟಗಾರಿಕೆಗಾಗಿ ಬೇಕಾಗುವ ರಸಗೊಬ್ಬರ, ಬಾಡಿಗೆ ಆಧಾರಿತ ಯಂತ್ರೋಪಕರಣ ಅಂತೆಯೇ ಮಾಹಿತಿ ಶಿಬಿರಗಳು, ಇತ್ತೀಚೆಗೆ ಆರಂಭಗೊಂಡ ತೆಂಗಿನಕಾಯಿ ವ್ಯಾಪಾರ ಕಾರ್ಕಳದ ರೈತರಿಗೆ ಸಹಕಾರಿಯಾಗಲಿದೆ ಎಂದು ತಮ್ಮ ಮುಖ್ಯ ಅಥಿತಿ ಭಾಷಣದಲ್ಲಿ ಹೇಳಿದರು. ನಂತರ ಆಗಮಿಸಿರುವ ಮೂರು ಗುಚ್ಚಗಳ ರೈತ ಸದಸ್ಯರಿಗೆ ಷೇರು ವಿತರಿಸಿ ಶುಭ ಹಾರೈಸಿದರು.

ಕಂಪೆನಿಯ ಅಧ್ಯಕ್ಷ ಅಂತೋನಿ ಡಿಸೋಜಾ ನಕ್ರೆ ಮಾತನಾಡಿ ಎಲ್ಲಾ ಸದಸ್ಯರ ಸಹಕಾರ ಕಂಪೆನಿಯ ಬೆಳವಣಿಗೆಗೆ ಪೂರಕವಾಗಲಿದೆ ಎಂದರು.

ಉಪಾಧ್ಯಕ್ಷ ಹರೀಶ್ಚಂದ್ರ ತೆಂಡುಲ್ಕರ್ ಸ್ವಾಗತಿಸಿದರು. ಕಂಪೆನಿಯ ಮುಖ್ಯ ನಿರ್ವಹಣಾ ಅಧಿಕಾರಿ ಗಂಗಾಧರ್ ಆರ್.ಪಣಿಯೂರು ಪ್ರಸ್ತಾವನೆ ಗೈದರು. ನಿರ್ದೇಶಕಿ ವೀಣಾ ನಾಯಕ್ ಪ್ರಾರ್ಥನೆಯನ್ನಾಡಿದರು. ನಿರ್ದೇಶಕರಾದ ಧರಣೇಂದ್ರ ಕಾರ್ಯಕ್ರಮ ನಿರೂಪಿಸಿದ್ದು, ನಿರ್ದೇಶಕ ಅನಿಲ್ ಪೂಜಾರಿ ಧನ್ಯವದಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...