Friday, July 4, 2025

5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸೋ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9ನೇ ತರಗತಿ ಕರ್ನಾಟಕ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡಿದೆ.

5ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25, 26 ರಂದು ಪರೀಕ್ಷೆಗಳು ನಡೆಯಲಿವೆ. 8ನೇ ತರಗತಿ, 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 25 ರಿಂದ 28 ರವರೆಗೆ ನಿರಂತರವಾಗಿ ವಿಷಯವಾರು ಪರೀಕ್ಷೆ ನಡೆಯಲಿದೆ. ಇನ್ನು, ಮಾ.25ನೇ ತಾರೀಕಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್​ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್​ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರಿಗೆ ಇದ್ದ ಆತಂಕ ದೂರ ಮಾಡಿದೆ.

5ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ವೇಳಾಪಟ್ಟಿ

  • ಪರಿಸರ ಅಧ್ಯಯನ : 25-03-2024
  • ಗಣಿತ ಪರೀಕ್ಷೆ : 26-03-2024

ಪರಿಸರ ಅಧ್ಯಯನ ಮೌಲ್ಯಾಂಕನ ಪರೀಕ್ಷೆ ಮಧ್ಯಾಹ್ನ 02-30 ರಿಂದ 04-30 ರವರೆಗೆ ನಡೆಯಲಿವೆ. ಗಣಿತ ವಿಷಯಕ್ಕೆ ಬೆಳಿಗ್ಗೆ 10-12 ಗಂಟೆವರೆಗೆ ಪರೀಕ್ಷೆ ನಡೆಯಲಿದೆ.

8 ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ಪರೀಕ್ಷೆ ವೇಳಾಪಟ್ಟಿ

  • ತೃತೀಯ ಭಾಷೆ ಹಿಂದಿ : 25-03-2024 (2-30 pm to 5 pm)
  • ಗಣಿತ ಪರೀಕ್ಷೆ : 26-03-2024 (10 am to 12-30 pm)
  • ವಿಜ್ಞಾನ ಪರೀಕ್ಷೆ : 27-03-2024 (2-30 pm to 5 pm)
  • ಸಮಾಜ ವಿಜ್ಞಾನ ಪರೀಕ್ಷೆ : 28-03-2024 (10 am to 12-30 pm)

9ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ಪರೀಕ್ಷೆ ವೇಳಾಪಟ್ಟಿ

  • ತೃತೀಯ ಭಾಷೆ ಹಿಂದಿ : 25-03-2024 (2 pm to 5 pm)
  • ಗಣಿತ ಪರೀಕ್ಷೆ : 26-03-2024 (10 am to 1-15 pm)
  • ವಿಜ್ಞಾನ ಪರೀಕ್ಷೆ : 27-03-2024 ( 2 pm to 5.15 pm)
  • ಸಮಾಜ ವಿಜ್ಞಾನ ಪರೀಕ್ಷೆ : 28-03-2024 (10 am to 1-15 pm)

More from the blog

ದ. ಕ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ – ಸಿಎಂಗೆ ಬಿ. ರಮಾನಾಥ ರೈ ಅಭಿನಂದನೆ..

ಬೆಂಗಳೂರು :  ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್...

ಬೂಡ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಆಗುತ್ತಿಲ್ಲ: ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಆಕ್ರೋಶ

ಬಂಟ್ವಾಳ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಆರೋಪಗಳು ಕೇಳಿ ಬಂದಿದ್ದು, ಪ್ರಾಧಿಕಾರದ ವಿರುದ್ದ ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದಲ್ಲಿ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ  : ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಗೆ ಮನವಿ

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಬೇಟಿಯಾಗಿ ಮನವಿ ನೀಡಿದ್ದಾರೆ. ಬಳಿಕ...

ರಸ್ತೆ ಅಭಿವೃದ್ಧಿ ಕಾಮಗಾರಿ – ಜಾಗ ಕಳೆದುಕೊಂಡವರಿಗೆ ಬೆಳ್ತಂಗಡಿಯಲ್ಲಿ ದಾಖಲೆ ಸಂಗ್ರಹ ಶಾಖೆ ಆರಂಭ.. 

ಬೆಳ್ತಂಗಡಿ : ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ರಸ್ತೆಯ ಅಭಿವೃದ್ಧಿ ಕಾಮಗಾರಿ ವೇಳೆ ಬಹುತೇಕ ಸ್ಥಳೀಯರು ಜಾಗ ಕಳೆದುಕೊಂಡಿದ್ದರು. ಇದೀಗ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರ ಮುತುವರ್ಜಿಯಲ್ಲಿ ರಾಷ್ಟ್ರೀಯ...