Saturday, July 5, 2025

ಮಾಹಿತಿ ಕಾರ್ಯಗಾರ

ಬಂಟ್ವಾಳ: ರಾಷ್ಟ್ರೀಯ ಕಾರ್ಯಕ್ರಮ ಎನ್.ಆರ್‌.ಎಲ್.ಎಂ. ಸಂಜೀವಿನಿ ಯೋಜನೆಯ ಬಗ್ಗೆ ತಾಲೂಕು ಪಂಚಾಯತ್ ವತಿಯಿಂದ
 ಬಂಟ್ವಾಳ ತಾಲೂಕಿನ ಎಂ.ಬಿ.ಕೆ, ಬಿ.ಆರ್.ಪಿ, ಎಲ್.ಸಿ.ಆರ್.ಪಿ, ಎಂ.ಸಿ.ಆರ್.ಪಿ ಮತ್ತು ಪಂಚಾಯತ್ ಮಟ್ಟದ ಸ್ವಸಹಾಯ ಸಂಘಗಳ ಅಧ್ಯಕ್ಷ ರು ಹಾಗೂ ಕಾರ್ಯದರ್ಶಿಗಳಿಗೆ ಒಂದು ದಿನದ ಮಾಹಿತಿ ಕಾರ್ಯಗಾರ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು.
ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕರಾದ ಎನ್.ಕೆ.ಆಲಿ.ಅವರ ಅಧ್ಯಕ್ಷ ತೆಯಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ಮಾತನಾಡಿದ ಅವರು
ಸ್ವಸಹಾಯ ಸಂಘಗಳಿಗೆ ಸ್ವಯಂ ಉದ್ಯೋಗ ದ ದೃಷ್ಟಿಯಿಂದ ಸರಕಾರ ಈ ಯೋಜನೆಯ ಮೂಲಕ ಸಾಲ ಸೌಲಭ್ಯಗಳನ್ನು ನೀಡಿ ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶ ಹೊಂದಿದೆ.
ಪ್ರತಿಯೊಬ್ಬ ಸದಸ್ಯರು ಈ ಯೋಜನೆಯ ಮಾಹಿತಿ ಪಡೆದುಕೊಂಡು ಸ್ವಾವಲಂಬಿ ಗಳಾಗಿ ಜೀವನ ನಡೆಸಲು ಮುಂದಾಹಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯ ಲೆಕ್ಕ ಪತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಝೀವಲ್ ಖಾನ್, ತಾ.ಪಂ.ಕಾರ್ಯನಿರ್ವಣಾಧಿಕಾರಿ ರಾಜಣ್ಣ, ತಾ.ಪಂ.ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ, ತಾಲೂಕು ಮೇಲ್ವಿಚಾರಕ ಕುಶಾಲಪ್ಪ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

Agriculture : ‘ರಥಬೀದಿ ಜವನೆರ್’ ತಂಡದ ಸದಸ್ಯರಿಂದ ಭತ್ತದ ನಾಟಿ..

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ. "ರಥಬೀದಿ ಜವನೆರ್ " ಎಂಬ ಹೆಸರಿನ ಸುಮಾರು 15...

ಅಕ್ರಮ ಗಣಿಗಾರಿಕೆ : ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು..

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ಸಮೀಪದ ಕುವಡ್ಕ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದು,ಆರೋಪಿಗಳ ಬಗ್ಗೆ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು...

ಆರ್.ಎಸ್.ಎಸ್. ನಿಷೇದ ಬಗೆಗಿನ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಪ್ರಭಾಕರ ಪ್ರಭು

ಬಂಟ್ವಾಳ : ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಆರ್. ಎಸ್ ಎಸ್. ನಿಷೇಧಿಸುವ ತೀರ್ಮಾನ ಮಾಡುತ್ತೇವೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ನೀಡಿರುವ ದುರಹಂಕಾರದ,...

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...