Thursday, February 13, 2025

ಮಾಹಿತಿ ಕಾರ್ಯಗಾರ

ಬಂಟ್ವಾಳ: ರಾಷ್ಟ್ರೀಯ ಕಾರ್ಯಕ್ರಮ ಎನ್.ಆರ್‌.ಎಲ್.ಎಂ. ಸಂಜೀವಿನಿ ಯೋಜನೆಯ ಬಗ್ಗೆ ತಾಲೂಕು ಪಂಚಾಯತ್ ವತಿಯಿಂದ
 ಬಂಟ್ವಾಳ ತಾಲೂಕಿನ ಎಂ.ಬಿ.ಕೆ, ಬಿ.ಆರ್.ಪಿ, ಎಲ್.ಸಿ.ಆರ್.ಪಿ, ಎಂ.ಸಿ.ಆರ್.ಪಿ ಮತ್ತು ಪಂಚಾಯತ್ ಮಟ್ಟದ ಸ್ವಸಹಾಯ ಸಂಘಗಳ ಅಧ್ಯಕ್ಷ ರು ಹಾಗೂ ಕಾರ್ಯದರ್ಶಿಗಳಿಗೆ ಒಂದು ದಿನದ ಮಾಹಿತಿ ಕಾರ್ಯಗಾರ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು.
ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕರಾದ ಎನ್.ಕೆ.ಆಲಿ.ಅವರ ಅಧ್ಯಕ್ಷ ತೆಯಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ಮಾತನಾಡಿದ ಅವರು
ಸ್ವಸಹಾಯ ಸಂಘಗಳಿಗೆ ಸ್ವಯಂ ಉದ್ಯೋಗ ದ ದೃಷ್ಟಿಯಿಂದ ಸರಕಾರ ಈ ಯೋಜನೆಯ ಮೂಲಕ ಸಾಲ ಸೌಲಭ್ಯಗಳನ್ನು ನೀಡಿ ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶ ಹೊಂದಿದೆ.
ಪ್ರತಿಯೊಬ್ಬ ಸದಸ್ಯರು ಈ ಯೋಜನೆಯ ಮಾಹಿತಿ ಪಡೆದುಕೊಂಡು ಸ್ವಾವಲಂಬಿ ಗಳಾಗಿ ಜೀವನ ನಡೆಸಲು ಮುಂದಾಹಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯ ಲೆಕ್ಕ ಪತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಝೀವಲ್ ಖಾನ್, ತಾ.ಪಂ.ಕಾರ್ಯನಿರ್ವಣಾಧಿಕಾರಿ ರಾಜಣ್ಣ, ತಾ.ಪಂ.ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ, ತಾಲೂಕು ಮೇಲ್ವಿಚಾರಕ ಕುಶಾಲಪ್ಪ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...