Tuesday, February 11, 2025

ಜೇನುಕೃಷಿ ಮಾಹಿತಿ ಕಾರ್ಯಾಗಾರ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ 4ನೇ ತರಗತಿ ವಿದ್ಯಾರ್ಥಿಗಳಿಗೆ ಜೇನು ಕೃಷಿ ಮಾಹಿತಿ ಕಾರ್‍ಯಗಾರ ನಡೆಯಿತು.
ಚಲಿಸುವ ಚೌಕಟ್ಟಿನ ಪೆಟ್ಟಿಗೆಯಲ್ಲಿ ಸಾಕುವುದೇ ಜೇನು ಕೃಷಿ. ಜೇನುನೊಣದಲ್ಲಿ ನಾಲ್ಕು ವಿಧಗಳಿವೆ. ತುಡುವೆ ನೊಣವನ್ನು ಮಾತ್ರ ಪೆಟ್ಟಿಗೆಯಲ್ಲಿ ಸಾಕುತ್ತಾರೆ. ಜೇನುನೊಣ ಪಕೃತಿಯಲ್ಲಿ ಬಹುಮುಖ್ಯವಾದ ಪಾತ್ರ ವಹಿಸುತ್ತದೆ. ಜೇನುನೊಣಗಳಿಲ್ಲದೆ ಪರಾಗಸ್ಪರ್ಶ ಸಾದ್ಯವಿಲ್ಲ, ಜೇನು ಸಂತತಿ ನಾಶ ಆದರೆ ಉತ್ಪಾದನೆ ಕಡಿಮೆಯಾಗಿ ಮನುಷ್ಯ ಸಂತತಿ ಕೂಡ ನಾಶ ಆಗುತ್ತದೆ ಆದ್ದರಿಂದ ಜೇನು ಉಳಿಸುವುದು ನಮ್ಮ ಕರ್ತವ್ಯವೂ ಆಗಿದೆ ಎಂದು ದೂರವಾಣಿ ಇಲಾಖೆಯಲ್ಲಿ ಉದ್ಯೋಗದಲ್ಲಿರುವ ಹಾಗೂ ಪ್ರಗತಿಪರ ಕೃಷಿಕರೂ ಆದಂತಹ ರಾಕೋಡಿ ಈಶ್ವರ ಭಟ್‌ರವರು ವಿವರಿಸಿದರು.


4ನೇ ತರಗತಿಯ ಪರಿಸರ ಅಧ್ಯಯನ ವಿಷಯದ ಸವಿಜೇನು ಪಾಠಕ್ಕೆ ಸಂಬಂಧಿಸಿದಂತೆ ಜೇನು ಸಾಕಣೆ ಹೇಗೆ ಮಾಡುವುದು, ಯಾವ ಜೇನಿನಿಂದ ಜೇನು ಕೃಷಿ ಮಾಡುವುದು, ಅದರಿಂದಾಗುವ ಲಾಭ ಇತ್ಯಾದಿ ವಿಷಯದ ಕುರಿತಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಜೇನು ಕೃಷಿಯ ಕುರಿತಾದ ತಮ್ಮ ಸಂಶಯಗಳನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶಾಲಾ ಮುಖ್ಯಗುರುಗಳಾದ ರವಿರಾಜ ಕಣಂತೂರು ಉಪಸ್ಥಿತರಿದ್ದರು. ಈ ಕಾರ್‍ಯಗಾರದಲ್ಲಿ ೪ನೇ ತರಗತಿಯ ೧೫೯ ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು ಭಾಗವಹಿಸಿದ್ದರು.
ಅಧ್ಯಾಪಕರಾದ ರೂಪಕಲಾ ಸ್ವಾಗತಿಸಿ, ಚೈತ್ರ ಎನ್ ಕೆ ವಂದಿಸಿದರು.

More from the blog

ಇದು ಸರಕಾರಿ ಜಾಗವೋ,ತಾ.ಪಂ.ನ ಜಾಗನಾ? ಇದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...