Monday, January 26, 2026

ಪಂಚಾಯತ್ ಸದಸ್ಯರು ಸಮಾಜದ ಜೊತೆ ಬೆರೆತಾಗ ಗ್ರಾಮಸ್ವರಾಜ್ಯದ ಪರಿಕಲ್ಪನೆ ಸಾಕಾರ: ಟಿ.ಎಂ. ಅಬೂಬಕ್ಕರ್

ಬಂಟ್ವಾಳ: ಪಂಚಾಯತ್ ಸದಸ್ಯರು ಸಮಾಜದ ಜೊತೆಗೆ ಬೆರೆತಾಗ ಮಾತ್ರ ಗ್ರಾಮಸ್ವರಾಜ್ಯದ ಪರಿಕಲ್ಪನೆ ಸಾಕಾರಗೊಳ್ಳಲು ಸಾಧ್ಯ ಎಂದು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ರಾಜ್ಯ ತರಬೇತಿ ಸಂಯೋಜಕ ಟಿ.ಎಂ. ಅಬೂಬಕ್ಕರ್ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು, ದ.ಕ. ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್. ವೈ. ಮತ್ತು ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಗಾರಕ್ಕೆ ಬುಧವಾರ ಭೇಟಿ ನೀಡಿದ ಅವರು, ಗ್ರಾ.ಪಂ. ಸದಸ್ಯರೊಂದಿಗೆ ಮಾತನಾಡಿದರು.

ಪಂಚಾಯತ್ ರಾಜ್ ಪರಿಕಲ್ಪನೆ, ಮೂಲ ಆಶಯ, ತರಬೇತಿಯ ರೂಪುರೇಷೆಯ ಕುರಿತು ವಿವರಿಸಿದ ಅವರು, ಎಲ್ಲಾ ಸದಸ್ಯರು ಬದಲಾಗಿರುವ ಪಂಚಾಯತ್ ರಾಜ್ ಕಾಯ್ದೆಯ ಬಗ್ಗೆ ಅರಿವನ್ನು ಪಡೆದುಕೊ ಳ್ಳಬೇಕು ಎಂದರು. ಸದಸ್ಯರಾಗಿ ಆಯ್ಕೆಯಾಗಿರುವುದು ನಿಮಗೆ ದೊರಕಿರುವ ದೊಡ್ಡ ಅವಕಾಶವಾಗಿದ್ದು, ಲೋಕನೌಕರ ಎನ್ನುವ ಮನೋಭಾವದೊಂದಿಗೆ ಗ್ರಾಮದ ಅಭಿವೃದ್ಧಿಯ ಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಡಿ. ಪ್ರಶಾಂತ್ ಬಳಂಜ, ತರಬೇತುದಾರರಾದ ಮಂಜುವಿಟ್ಲ, ಉಮಾನಾಥ ಶೆಟ್ಟಿ, ಮೌನೇಶ್ ವಿಶ್ವಕರ್ಮ, ಜಯಲಕ್ಷ್ಮಿ, ಫಾರೂಕ್ ಗೂಡಿನಬಳಿ ಈ ಸಂದರ್ಭದಲ್ಲಿ ಹಾಜರಿದ್ದರು.

More from the blog

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು – ವಜ್ರದೇಹಿ ಶ್ರೀ

ವಿಟ್ಲ: ಹಿಂದು ಸಮಾಜ ಪ್ರಸಕ್ತ ಪರಿಸ್ಥಿತಿಯಲ್ಲೂ ಎಚ್ಚೆತ್ತುಕೊಳ್ಳದಿದ್ದರೆ ಹಿಂದುಗಳು ಗಂಡಾಂತರ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಜಾತಿ ಸಮುದಾಯಗಳು ಒಟ್ಟಾಗಿ ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು. ಹೀಗಾದಾಗ ಮಾತ್ರ ರಾಜಕೀಯ ಷಡ್ಯಂತ್ರಗಳನ್ನು ಮೆಟ್ಟಿ ಮುನ್ನಡೆಯ...