ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2, ಇಲ್ಲಿ ಪ್ರಥಮ ವರ್ಷದ ಬಿಬಿಎಂ ಹಾಗೂ ಬಿಎ ವಿದ್ಯಾರ್ಥಿಗಳಿಗೆ ನಿಮಾನ್ಸ್ ಬೆಂಗಳೂರು ಮತ್ತು ಯುವ ಸ್ಪಂದನ ಮಂಗಳೂರು ಇದರ ಸಹಯೋಗದೊಂದಿಗೆ ಜೀವನ ಕೌಶಲ ಕಾರ್ಯಾಗಾವನ್ನು ಹಮ್ಮಿಕೊಳ್ಳಲಾಯಿತ್ತು.



ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಪ್ರೊ ಗಣಪತಿಭಟ್ ಕುಳಮರ್ವ ಇವರು ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಕಾಂತ್ ಪೂಜಾರಿ ಬಿರಾವು ಹಾಗೂ ಶಾಂತಪ್ಪ ಇವರು ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ICAQ ಸಂಚಾಲಕರಾದ ಪ್ರೊ ರವಿಶಂಕರ್ ಬಿ, ಪ್ರೊ ವಿಶಾಲ್ ಪಿಂಟೋ, ಪ್ರೊ ದೀಕ್ಷಿತ ವರ್ಕಾಡಿ ಹಾಗೂ ಪ್ರೊ ಪ್ರೀತಿ ಕೆ ರಾವ್ ಇವರು ಉಪಸ್ಥಿತರಿದ್ದರು. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾದಿಕಾರಿಯಾದ ಪ್ರೂ ರಾಜೇಶ್ವರಿ ಎಚ್ ಎಸ್ ಹಾಗೂ ಪ್ರೂ ಸಂತೋಷ್ ಪ್ರಭು ಎಂ ಇವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವು ವಿದ್ಯಾ ಅವರ ನಿರೂಪಣೆಯಲ್ಲಿ ಮಧುರ ಅವರು ಬಂದ ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಚೈತ್ರ ಇವರು ಎಲ್ಲರಿಗೂ ವಂದಿಸಿದರು. ಕಾರ್ಯಕ್ರಮ ದಲ್ಲಿ ಎಲ್ಲಾ ಪ್ರಥಮ ಬಿಎ ಹಾಗೂ ಬಿಬಿಎ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿಗೂಳಿಸಿದರು.












