Saturday, February 8, 2025

ಅಕ್ರಮ‌ ಕಸಾಯಿಕಾನೆಗೆ ಪುಂಜಾಲಕಟ್ಟೆ ಪೋಲೀಸರಿಂದ ದಾಳಿ ನಾಲ್ವರ ಬಂಧನ

ಬಂಟ್ವಾಳ: ಅಕ್ರಮ ಕಸಾಯಿಕಾನೆಗೆ ದಾಳಿ ನಡೆಸಿದ ಪುಂಜಾಲಕಟ್ಟೆ ಎಸ್. ಐ.ಸೌಮ್ಯ ಆರೋಪಿ ಗಳ ಸಹಿತ ಸಾವಿರಾರು ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಗಕಜೆಕಾರು ನಿವಾಸಿಗಳಾದ ಇಸಾಕ್, ಅಸ್ಬಾಲ್, ಮೊಹಮ್ಮದ್ ಶಾಕೀರ್ , ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳಾದರೆ ಉಳಿದಂತೆ ಓರ್ವ ಆರೋಪಿ ಪರಾರಿಯಾಗಿದ್ದಾನೆ.


ಬಂಧಿತರಿಂದ ಎರಡು ಬೈಕ್ ಸಹಿತ 61 ಸಾವಿರದ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಕೆದಿಲ ಎಂಬ ಲ್ಲಿ ಆರೋಪಿ ಉಮ್ಮರಬ್ಬನ ಮನೆಯ ಹಿಂದುಗಡೆ ಶೆಡ್ಡಿನಲ್ಲಿ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ಗಳನ್ನು ಕಡಿದು ಮಾಂಸ ಮಾಡಿ ಮಾರಟ ಮಾಡಲು ತಯಾರು ನಡೆಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ್ದಾರೆ.


ಸ್ಥಳದಲ್ಲಿ ಅಂದಾಜು 50 ಕೆ.ಜಿ ಜಾನುವಾರು ಮಾಂಸ, ಕ್ರತ್ಯಕ್ಕೆ ಉಪಯೋಗಿಸಿದ ಸಲಕರಣೆ ಹಾಗೂ ಸಾಗಾಟ ಕ್ಕೆ ಬಳಸಿದ ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ದ ಕರ್ನಾಟಕ ಗೋವಧೆ ಪ್ರತಿ ಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...