Thursday, February 13, 2025

ಕ್ಷೇತ್ರದ ಮಹಿಮೆ ಎತ್ತಿ ಹಿಡಿದ ಕಟ್ಟೆಮಾರು ಶ್ರೀ ಮಂತ್ರದೇವತಾ, ಸ್ವಾಮಿ ಕೊರಗಜ್ಜ ಶ್ರೀ ಗುಳಿಗ ಸಾನಿಧ್ಯ

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಕಟ್ಟೆಮಾರ್ ಶ್ರೀ ಮಂತ್ರದೇವತಾ,ಸ್ವಾಮಿ ಕೊರಗಜ್ಜ, ಶ್ರೀ ಗುಳಿಗ ಸಾನಿಧ್ಯ ಕ್ಷೇತ್ರವು ತನ್ನ ಮಹಿಮೆಯನ್ನು ತೊರ್ಪಡಿಸಿದ ಅಪರೂಪದ ಘಟನೆ ಒಂದು ಸಂಭವಿಸಿದೆ.

ಫೆಬ್ರವರಿ10 ರಂದು ಸಾನಿಧ್ಯದಲ್ಲಿ ನಡೆದ ವಾರ್ಷಿಕ ಕೋಲೊತ್ಸವ ಸಂದರ್ಭದಲ್ಲಿ ಕ್ಷೇತ್ರದ ಭಕ್ತಿಯಾಗಿ ಆಗಮಿಸಿದ ಸುಳ್ಯ ಸಂಪಾಜೆಯ ಧನ್ಯ ಎಂಬ ಮಹಿಳೆಯ ಬ್ಯಾಗಿನಿಂದ ಸುಮಾರಿ 23 ಸಾವಿರ ರೂಪಾಯಿ ಹಣ ಕಳವಾಗಿತ್ತು.

ಈ ಬಗ್ಗೆ ನೊಂದ ಮಹಿಳೆ ಶ್ರೀ ಮಂತ್ರ ದೇವತೆ ಹಾಗೂ ಸ್ವಾಮಿ ಕೊರಗಜ್ಜನ ಕೋಲೊತ್ಸವದಲ್ಲಿ ದೈವದ ಮುಂದೆ ಹರಕೆ ಮಾಡಿದ್ದರು.

ಧೈವವು ಕಳೆದುಕೊಂಡದ್ದನ್ನು ಆದಷ್ಟು ಬೇಗ ಒದಗಿಸುವುದಾಗಿ ಅಭಯ ನೀಡಿದ್ದು ಕೇವಲ ಒಂದೇ ದಿನದಲ್ಲಿ ತನ್ನ ಮಹಿಮೆಯನ್ನು ತೋರಿಸಿದೆ. ಇವತ್ತು ಬೆಳಿಗ್ಗೆ ಕ್ಷೇತ್ರದಲ್ಲಿ ಸಂಕ್ರಮಣ ನಿಮಿತ್ತ ಪೂಜಾ ಕಾರ್ಯಕ್ರಮ ನಡೆಯುತ್ತಿರುವಾಗ ಕಾಣಿಕೆ ಡಬ್ಬಿಯ ಅಡಿಯಲ್ಲಿ 23000 ರೂಪಾಯಿ ಕಟ್ಟು ಒಂದನ್ನು ನೂಳಿನಲ್ಲಿ ಕಟ್ಟಿ ಇಟ್ಟದ್ದು ಗಮನಕ್ಕೆ ಬಂತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...