Wednesday, February 12, 2025

ಕಾವಳಮೂಡೂರು ಶ್ರೀ ರಾಜನ್‌ದೈವ ಕೊಡಮಣಿತ್ತಾಯಿ ದೈವಸ್ಥಾನ ಮಾ.19-22 : ವಾರ್ಷಿಕ ಜಾತ್ರೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾವಳಮಾಗಣೆ ಶ್ರೀ ರಾಜನ್‌ದೈವ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಮಾ.19ರಿಂದ ಮಾ.22ರವರೆಗೆ ಜರಗಲಿದೆ.
ಮಾ.19ರಂದು ಬೆಳಗ್ಗೆ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ, ಸಂಜೆ ಬಲ್ಲೋಡಿ ಮಾಗಣೆ ಗುತ್ತಿನಿಂದ ಶ್ರೀ ಕೊಡಮಣಿತ್ತಾಯಿ ದೈವದ ಭಂಡಾರ ಹೊರಟು ಕಾವಳಕಟ್ಟೆ ದೈವಸ್ಥಾನಕ್ಕೆ ಆಗಮನ, ರಾತ್ರಿ ಧ್ವಜಾರೋಹಣ, ಚೆಂಡು ಹಾಕುವುದು, ಬಲಿ ಉತ್ಸವ, ದೈವ ದರ್ಶನ, ಮಾ.20ರಂದು ಸಂಜೆ ಬಲಿ ಉತ್ಸವ, ದೈವ ದರ್ಶನ, ಮಾ.21ರಂದು ಬೆಳಗ್ಗೆ ಗಣಪತಿ ಹೋಮ, ಸಂಜೆ ಹೂವಿನ ಪೂಜೆ ಆರಂಭ, ಇತರ ಸೇವೆಗಳು-ಅಂಕ ಅಂಬೋಡಿ, ಮುಂಡೇವು, ಸೂಟೆದಾರ, ಕಾವಳಕಟ್ಟೆ ಬಸದಿಯಲ್ಲಿ ಪಂಚಾಮೃತಾಭಿಷೇಕ, ರಾತ್ರಿ ಅನ್ನಸಂತರ್ಪಣೆ, ಶ್ರೀ ರಾಜನ್ ದೈವ ಕೊಡಮಣಿತ್ತಾಯ ದೈವದ ನೇಮೋತ್ಸವ, ಬಲಿ ಉತ್ಸವ, ದರಿ ದೀಪೋತ್ಸವ, ಹುಲಿಬಂಡಿ ಉತ್ಸವ, ಕುದುರೆ ಬಂಡಿ ಉತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯರಿಂದ ಡಬಲ್ ಗೇಮ್ ತುಳುನಾಟಕ ಪ್ರದರ್ಶನವಿದೆ. ಮಾ.೨೨ರಂದು ಬೆಳಗ್ಗೆ ಧ್ವಜಾವರೋಹಣ, ಕುರುತಂಬಿಲ ನೇಮ, ಶ್ರೀ ಕ್ಷೇತ್ರದಿಂದ ಶ್ರೀ ಕೊಡಮಣಿತ್ತಾಯಿ ದೈವದ ಭಂಡಾರ ಬಲ್ಲೋಡಿ ಮಾಗಣೆ ಗುತ್ತಿಗೆ ನಿರ್ಗಮನ ನಡೆಯಲಿದೆ ಎಂದು ಆನುವಂಶಿಕ ಆಡಳಿತ ಮೊಕ್ತೇಸರ ಬಿ.ಭರತ್ ಕುಮಾರ್ ಜೈನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...