Friday, July 11, 2025

ಕಾವಳಮೂಡೂರು ಸರಕಾರಿ ಶಾಲೆ: ಚಿಣ್ಣರ ಕಲರವ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲೂಕು ಕಾವಳಮೂಡೂರು ಸರಕಾರಿ ಪ್ರೌಢಶಾಲೆ ಮತ್ತು ಕಾವಳಮೂಡೂರು ಸರಕಾರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ಚಿಣ್ಣರ ಕಲರವ-2019 ಕಾರ್ಯಕ್ರಮ ಜರಗಿತು.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪೋಷಕರು, ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಅವಕಾಶ ನೀಡಿ ಪ್ರೋತ್ಸಾಹಿಸಬೇಕು. ಮಕ್ಕಳ ಆಸಕ್ತಿಯನ್ನು ಗಮನಿಸಿ ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ವೇದಿಕೆ ಕಲ್ಪಿಸಬೇಕು ಎಂದು ಹೇಳಿದರು.
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಜಿ.ಪಂ. ಸದಸ್ಯ ಬಿ.ಪದ್ಮಶೇಖರ್ ಜೈನ್, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ಧನಲಕ್ಷ್ಮೀ ಸಿ. ಬಂಗೇರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್, ಸದಸ್ಯರಾದ ಇಸ್ಮಾಯಿಲ್ ಸಿದ್ದಿಕ್, ಸತೀಶ್ ಕುಮಾರ್ ಪಡಂತ್ರಬೆಟ್ಟು , ಅಬ್ದುಲ್ ನಜೀರ್ ಕಾವಳಕಟ್ಟೆ, ಚಂಪಾ, ಪೂವಕ್ಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ನಾಯಕ್ ರಾಯಿ, ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಮೂಡೂರು ಫ್ರೆಂಡ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಪುಷ್ಪಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪ್ರೇಮಾ ಕೆ.ಕೆ., ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ವಸಂತ ಶೆಟ್ಟಿ, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಪ್ರೌಢಶಾಲಾ ಶಿಕ್ಷಕಿಯರನ್ನು ಸಮ್ಮಾನಿಸಲಾಯಿತು. ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸುವ ಶಿಕ್ಷಕಿ ಕ್ಯಾರೆಲ್ ರೊಜಾರಿಯೋ ಅವರನ್ನು ಮತ್ತು 2018ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು. ಪ್ರೇಮಾ ಕೆ.ಕೆ. ವಂದಿಸಿದರು. ಬಳಿಕ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...