Wednesday, January 28, 2026

*ರೈತನ ಕಣ್ಣೀರು*

ರೈತ ದೇಶದ ಬೆನ್ನೆಲುಬು
ಎಂದು ಭಾಷಣ ಬೀಗಿದರೆ ಸಾಕೆ|
ನೋವುಗಳೇ ಗುಡುಗಿ ರೈತನ ಕಣ್ಣೀರು
ಮಳೆಯಾಗಿ ಹರಿಯುವುದು ಯಾಕೆ||
ಮೂರು ಹೊತ್ತು ಅನ್ನವೇ ಬೇಕು
ಪ್ರತಿಯೊಬ್ಬರ ಬದುಕಿನ ನಾಳೆಗೆ|
ಧಾವಿಸಿ ಬನ್ನಿರಿ ಎಲ್ಲರೂ
ಒಗ್ಗಟ್ಟಾಗಿ ಭವಿಷ್ಯದ ಏಳ್ಗೆಗೆ||
ಮುಗಿಲು ಮುಟ್ಟುವವರೆಗೂ ಕಾವು
ಹೋರಾಡಿ ಶ್ರಮದ ಗೆಲುವಿಗೆ|
ಅನ್ಯಾಯ ದೌರ್ಜನ್ಯಗಳ ತಡೆಗೆ
ನಿಲ್ಲಿ ನೇಗಿಲ ಯೋಗಿಯ ನೆರವಿಗೆ…

ಒಪ್ಪತ್ತು ಗಂಜಿಗೆ ದಿನವಿಡೀ ದುಡಿದು
ಬೆವರಲ್ಲಿ ಮೈ ಬಸಿಯುತ್ತಿರುವನು|
ಕೇಳುವವರಿಲ್ಲದೆ ಇವನ ಪಾಡು
ಹಾಡುಹಗಲೇ ಕುಸಿದು ಕುಳಿತಾನು||
ಕೀಟನಾಶಕ ರಸಗೊಬ್ಬರ
ವಿದ್ಯುತ್ ನೀರು ದುಬಾರಿ ಪರಿಕರ|
ಭರವಸೆ ನೀಡಿದ ಸರಕಾರ
ಸಹಾಯಧನ ಕಡಿತಗೊಳಿಸಿ ಹರೋಹರ||
ಕಷ್ಟ ನಷ್ಟಗಳ ಆಗರ
ಜೀವನವೇ ಇಲ್ಲಿ ಅತಿ ಭಾರ|
ಪ್ರತಿಭಟಿಸಿ ಸಿಡಿದೆದ್ದು ನಿಂತರೆ ರೈತ
ನಾಡಿಗೆ ನಾಡೇ ಹಾಹಾಕಾರ…

ಅತಿವೃಷ್ಟಿ ಅನಾವೃಷ್ಟಿ|
ಬಡತನವೇ ಇಲ್ಲಿ ಪಿತ್ರಾರ್ಜಿತ ಆಸ್ತಿ ||
ಅಸ್ಥಿರ ಮಾರುಕಟ್ಟೆಯ ವಸತಿ
ವೈಜ್ಞಾನಿಕ ಸಂಸ್ಕರಣೆಯು ನಾಸ್ತಿ||
ಖರ್ಚು ವೆಚ್ಚವಾಗಿ ಅಗಣಿತ
ಬೆಂಬಲ ಬೆಲೆಯಿಲ್ಲದೆ ಅತ್ತಿತ್ತ|
ಮಧ್ಯವರ್ತಿಯ ಹಾವಳಿ ವಿಪರೀತ
ರಾಜಕೀಯ ಇಚ್ಛಾಶಕ್ತಿಗಿದೆ ಕೊರೆತ||
ಬರಗಾಲದ ಬರೆ
ತಾಳದ ಭಾದೆಯು ಸಾಲದ ಮೊರೆ|
ದೀರ್ಘಕಾಲ ಕಿರುಕುಳದ ಹೊರೆ
ಕೃಷಿ ಪ್ರಗತಿಗೆ ಓಗೊಡಲಿ ಈ ಕರೆ….

 

*ಬಸವರಾಜ ಕಾಸೆ*

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...