Wednesday, February 12, 2025

*ರೈತನ ಕಣ್ಣೀರು*

ರೈತ ದೇಶದ ಬೆನ್ನೆಲುಬು
ಎಂದು ಭಾಷಣ ಬೀಗಿದರೆ ಸಾಕೆ|
ನೋವುಗಳೇ ಗುಡುಗಿ ರೈತನ ಕಣ್ಣೀರು
ಮಳೆಯಾಗಿ ಹರಿಯುವುದು ಯಾಕೆ||
ಮೂರು ಹೊತ್ತು ಅನ್ನವೇ ಬೇಕು
ಪ್ರತಿಯೊಬ್ಬರ ಬದುಕಿನ ನಾಳೆಗೆ|
ಧಾವಿಸಿ ಬನ್ನಿರಿ ಎಲ್ಲರೂ
ಒಗ್ಗಟ್ಟಾಗಿ ಭವಿಷ್ಯದ ಏಳ್ಗೆಗೆ||
ಮುಗಿಲು ಮುಟ್ಟುವವರೆಗೂ ಕಾವು
ಹೋರಾಡಿ ಶ್ರಮದ ಗೆಲುವಿಗೆ|
ಅನ್ಯಾಯ ದೌರ್ಜನ್ಯಗಳ ತಡೆಗೆ
ನಿಲ್ಲಿ ನೇಗಿಲ ಯೋಗಿಯ ನೆರವಿಗೆ…

ಒಪ್ಪತ್ತು ಗಂಜಿಗೆ ದಿನವಿಡೀ ದುಡಿದು
ಬೆವರಲ್ಲಿ ಮೈ ಬಸಿಯುತ್ತಿರುವನು|
ಕೇಳುವವರಿಲ್ಲದೆ ಇವನ ಪಾಡು
ಹಾಡುಹಗಲೇ ಕುಸಿದು ಕುಳಿತಾನು||
ಕೀಟನಾಶಕ ರಸಗೊಬ್ಬರ
ವಿದ್ಯುತ್ ನೀರು ದುಬಾರಿ ಪರಿಕರ|
ಭರವಸೆ ನೀಡಿದ ಸರಕಾರ
ಸಹಾಯಧನ ಕಡಿತಗೊಳಿಸಿ ಹರೋಹರ||
ಕಷ್ಟ ನಷ್ಟಗಳ ಆಗರ
ಜೀವನವೇ ಇಲ್ಲಿ ಅತಿ ಭಾರ|
ಪ್ರತಿಭಟಿಸಿ ಸಿಡಿದೆದ್ದು ನಿಂತರೆ ರೈತ
ನಾಡಿಗೆ ನಾಡೇ ಹಾಹಾಕಾರ…

ಅತಿವೃಷ್ಟಿ ಅನಾವೃಷ್ಟಿ|
ಬಡತನವೇ ಇಲ್ಲಿ ಪಿತ್ರಾರ್ಜಿತ ಆಸ್ತಿ ||
ಅಸ್ಥಿರ ಮಾರುಕಟ್ಟೆಯ ವಸತಿ
ವೈಜ್ಞಾನಿಕ ಸಂಸ್ಕರಣೆಯು ನಾಸ್ತಿ||
ಖರ್ಚು ವೆಚ್ಚವಾಗಿ ಅಗಣಿತ
ಬೆಂಬಲ ಬೆಲೆಯಿಲ್ಲದೆ ಅತ್ತಿತ್ತ|
ಮಧ್ಯವರ್ತಿಯ ಹಾವಳಿ ವಿಪರೀತ
ರಾಜಕೀಯ ಇಚ್ಛಾಶಕ್ತಿಗಿದೆ ಕೊರೆತ||
ಬರಗಾಲದ ಬರೆ
ತಾಳದ ಭಾದೆಯು ಸಾಲದ ಮೊರೆ|
ದೀರ್ಘಕಾಲ ಕಿರುಕುಳದ ಹೊರೆ
ಕೃಷಿ ಪ್ರಗತಿಗೆ ಓಗೊಡಲಿ ಈ ಕರೆ….

 

*ಬಸವರಾಜ ಕಾಸೆ*

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ಮಂಗಳೂರು: 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಸೋಂಕು ಪತ್ತೆ ಆಗಿದೆ. ಆ ಮೂಲಕ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ದುಬಾೖಯಿಂದ ಜ.17ರಂದು ಹಿಂದಿರುಗಿದ್ದ 40 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್‌ ರೋಗ ಲಕ್ಷಣಗಳು...