Friday, July 11, 2025

ಶಪಥ

ದ್ವಿಭುಜಧಾರಿಯಾದೆನ್ನ
ಒನಪು ಒಯ್ಯಾರದೆ
ವಲ್ಲಭನ ಮಾಡಿ
ಚತುರ್ಭುಜಧಾರಿಯಾಗಿಸಿದೆ

ಸಾಕು ಸಾಕೆಂದರೂ
ಬಿಡದೆ ಕಾಡಿ ಬೇಡಿ
ಎಳೆದೆಳೆದು ವರುಷದಲೇ
ಷಡ್ಭುಜಧಾರಿಯಾಗಿಸಿದೆ

ಮತ್ತದೇ ವರಾತ
ತಲೆಬಾಗಿದೆ ನಾನೂ
ವರುಷೊಪ್ಪೊತ್ತಿನಲ್ಲಿಯೇ
ಅಷ್ಟಭುಜಧಾರಿಯಾಗಿಸಿದೆ

ನಿನ್ನಾಸೆಗೆ ಮಣಿದು
ಕುಣಿದು ಕುಣಿದು ದಣಿದಿರುವೆ
ಈಗಲಾದರೂ ಬಿಟ್ಟು ಬಿಡು
ನನ್ನ ನನ್ನ ಪಾಡಿಗೆ

ದಶಭುಜಧಾರಿಯಾಗಿಸುವ
ಹುಚ್ಚು ಸಾಹಸಕೆ
ನೀನೇನಾದರೂ ಕೈ ಹಾಕಿದರೆ
ಇಕೋ ನಾನಾಗಿಬಿಡುವೆ

ಡ್ಗ
ಧಾ
ರಿ…..!

✍️ನೀ. ಶ್ರೀಶೈಲ ಹುಲ್ಲೂರು

More from the blog

ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ತೊಂದರೆ : ಸಮಸ್ಯೆ ಬಗೆಹರಿಸಲು ಬಿ.ಎಂ.ಎಸ್ ಮನವಿ 

ಬಂಟ್ವಾಳ: ರಾಜ್ಯ ಸರಕಾರವು ಸ್ಪಷ್ಟ ಕಾನೂನು ರೂಪಿಸದ ಪರಿಣಾಮ ಪ್ರಸ್ತುತ ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸವಿಲ್ಲದೆ ಕುಟುಂಬ ಪೋಷಣೆ ಕಷ್ಟವಾಗಿದೆ. ಸಾಲದ ಕಂತು ಪಾವತಿಸುವುದು ಕೂಡ ಸವಾಲಾಗಿದ್ದು, ಶಾಲಾರಂಭದಲ್ಲೇ ಇಂತಹ ಸಮಸ್ಯೆಯಿಂದ...

Women missing : ವಿವಾಹಿತ ಮಹಿಳೆ ನಾಪತ್ತೆ – ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಬಿಸಿರೋಡಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆ ನಿವಾಸಿ ವಸಂತ ನಾಗಣ್ಣ...

Government Hospital : ಸರಕಾರಿ ಆಸ್ಪತ್ರೆಯ ಆವರಣದೊಳಗೆ ಅನಧಿಕೃತವಾಗಿ ವಾಹನಗಳ ಪಾರ್ಕ್ – ರೋಗಿಗಳಿಗೆ ತೊಂದರೆ..

ಬಂಟ್ವಾಳ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಅವರಣದ ಒಳಗೆ ರಿಕ್ಷಾ ಸಹಿತ ಇತರೆ ವಾಹನಗಳನ್ನು ‌ಅನಧಿಕೃತವಾಗಿ ಪಾರ್ಕ್ ಮಾಡಲಾಗಿ ಹೋಗುತ್ತಾರೆ, ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಹಿತ ಅಂಬ್ಯುಲೆನ್ಸ್ ವಾಹನಗಳಿಗೆ ಸಂಚಾರಕ್ಕೆ ತೊಡಕುಂಟಾಗಿದೆ ಎಂಬ‌...

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ, ಹಲ್ಲೆ: ಎರಡು ಪ್ರಕರಣ ದಾಖಲು..

ಬಂಟ್ವಾಳ: ಪಿಕಪ್ ವಾಹನದಲ್ಲಿ ಕೂಡಿ ಹಾಕಿ ಸುಮಾರು ಐದು ಜಾನುವಾರುಗಳನ್ನು ಸಾಗಾಟ ಮಾಡಿದ ಪರಿಣಾಮ ಕರು ಸತ್ತಿದೆ ಎಂಬ ಆರೋಪದ ಮೇಲೆ ಹಾಗೂ ಜಾನುವಾರು ಸಾಗಾಟ ಮಾಡಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ...