Thursday, February 13, 2025

ಅಗಲಿದ ವೀರ ಯೋಧರಿಗೆ ವೀರಾಂಜಲಿ!

ಅಗಲಿದ ವೀರ ಯೋಧರಿಗೆ ವೀರಾಂಜಲಿ!
ಸೇನೆಯಲಿ ಜೀವದ ಹಂಗು ತೊರೆದು
ಹೋರಾಡುತ್ತಿರುವ ನಮ್ಮ ಹೆಮ್ಮೆಯ ಯೋಧರಿಗೆ ಅರ್ಪಣೆ!

*ನಾನು ಯೋಧ*

ಬಾಣ ಬಿರುಸು
ಗಳೊಂದು ನಾಟವು
ಗಟ್ಟಿ ಎದೆಯೆನದು!
ಸೋಲದಿರುವುದೆ
ಎನ್ನ ಗರಿಮೆಯು
ದಿಟ್ಟ ನಿಲುವೆನದು!

ಉದಿತ ಮಾರ್ಗವು
ವಿದಿತವೆಲ್ಲವು
ಜಟ್ಟಿ ತನುವೆನದು!
ಕುದಿವ ಬಿಂದುವ
ನೊದವಿ ಸಾಗುವ
ನೆಟ್ಟ ಮನವೆನದು!

ತೇಲು ಬಾಣವ
ಕೈಲಿ ಹಿಡಿಯುವ
ಶೂರ ಪಡೆಯೆನದು!
ಹಾರು ಹಕ್ಯಿಯ
ಪುಕ್ಕ ಎಣಿಸುವ
ಧೀರ ನಡೆಯೆನದು!

ಬೆಳ್ಳಿ ಚುಕ್ಕಿಯ
ಅಂಗೈಲಿ ಧರಿಸುವ
ಭವ್ಯ ಬಲವೆನದು!
ಹಿಮಾಲಯವ
ಮುಂಗೈಲಿ ಭರಿಸುವ
ದಿವ್ಯ ಛಲವೆನದು!

ಸಾವ ಸಿರಿಯನೆ
ಕೊಳ್ಳೆ ಹೊಡೆಯುವ
ಪರಮ ಗುರಿಯೆನದು!
ಮತ್ತೆ ಈ ಮಣ್ಣಲಿ
ಜನ್ಮ ತಳೆಯುವ
ಪುಣ್ಯ ಸಿರಿಯೆನದು!

 

#ನೀ.ಶ್ರೀಶೈಲ ಹುಲ್ಲೂರು
ಮಂದಹಾಸ ಬಸವೇಶ್ವರ ವೃತ್ತ
ಜಮಖಂಡಿ – 587301
🌠9448591167

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ಮಂಗಳೂರು: 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಸೋಂಕು ಪತ್ತೆ ಆಗಿದೆ. ಆ ಮೂಲಕ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ದುಬಾೖಯಿಂದ ಜ.17ರಂದು ಹಿಂದಿರುಗಿದ್ದ 40 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್‌ ರೋಗ ಲಕ್ಷಣಗಳು...