Wednesday, February 12, 2025

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಕಾವೂರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಅಮಾನತು

ಮಂಗಳೂರು: ಪ್ರಕರಣವೊಂದರ ಬಗ್ಗೆ ದೂರು ನೀಡಲು ಬಂದ ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಸಂತೋಷ್‌ನನ್ನು ಅಮಾನತುಗೊಳಿಸಿ ಪೊಲೀಸ್‌ ಕಮಿಷನರ್‌ ಆದೇಶಿಸಿದ್ದಾರೆ.

ಮಹಿಳೆಯು ಪ್ರಕರಣವೊಂದಕ್ಕೆ ಸಂಬಂಧಿಸಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಆಕೆಗೆ ಅಸಭ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರು ನೀಡಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಘಾತಗೊಂಡ ಮಹಿಳೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಅವರಿಗೆ ದೂರು ನೀಡಿದ್ದರು.

ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್‌ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...