Tuesday, January 27, 2026

ಭಾರತದ ಪ್ರಥಮ ಹಜ್ಜ್ ತಂಡಕ್ಕೆ ಕೆ.ಸಿ.ಎಫ್ ಮಕ್ಕಾ ಹಜ್ಜ್ ಸ್ವಯಂ ಸೇವಕರಿಂದ ಭವ್ಯ ಸ್ವಾಗತ

ಮುಂಬಯಿ: 2019ನೇ ಸಾಲಿನ ಪವಿತ್ರ ಹಜ್ಜ್ ನಿರ್ವಹಿಸಲು ಭಾರತದ ದೆಹಲಿಯಿಂದ ಅಗಮಿಸಿದ ಪ್ರಥಮ ಹಜ್ಜ್ ತಂಡವು ಇಂದು ಪವಿತ್ರ ಮದೀನಾ ಮುನವ್ವರದಿಂದ ಪುಣ್ಯ ಮಕ್ಕಾ ನಗರಕ್ಕೆ ತಲುಪಿದ್ದು. ಈ ಎಲ್ಲಾ ಹಾಜಿಗಳನ್ನು ಕನಾ೯ಟಕ ಕಲ್ಚರಲ್ ಪೌಂಡೇಷನ್ KCFಹಜ್ಜ್ ಸ್ಟಯಂ ಸೇವಕರು (HVC) ಬಹಳ ಆತ್ಮೀಯವಾಗಿ ಸ್ವಾಗತಿಸಿದರು.
ಇದೇ ವೇಳೆ ಭಾರತದ ರಾಯಭಾರಿಯಾಗಿ ಆಗಮಿಸಿದ ಡಾ| ಆಸಫ್ ಸಯೀದ್ ಹಾಗೂ  ಭಾರತ ದೂತವಾಸ ಕಚೇರಿಯ ಸಲಹೆಗಾರರಾದ ನೂರ್ ರಹ್ಮಾನ್ ಶೇಖ್ ರವರನ್ನು ಕೆ.ಸಿ.ಎಫ್ ಮಕ್ಕತ್ತುಲ್ ಮುಕರ್ರಮಃ ಸೆಕ್ಟರ್ HVC ತಂಡದ ವತಿಯಿಂದ ಪ್ರತ್ಯೇಕ ಹೂ ಗುಚ್ಚಗಳನ್ನು ನೀಡಿ ಸನ್ಮಾನಿಸಲಾಯಿತು.
ಅದೇ ರೀತಿ ಮಕ್ಕಾದ ವಸತಿ ಕೇಂದ್ರಗಳಲ್ಲಿ ಹಾಜಿಗಳ ಕೂಠಡಿ ಗಳಿಗೆ ಲಗೇಜು, ಸಾಮಾಗ್ರಿಗಳನ್ನು ಕೊಂಡೊಯ್ಯಲು ಸಹಾಯಕರಾಗುವುದರೊಂದಿಗೆ ಮುಂದಿನ ದಿನಗಳಲ್ಲಿ ಪುಣ್ಯ ಮಕ್ಕಾ ನಗರಗಳಿಗೆ ಆಗಮಿಸುತ್ತಿರುವ ಎಲ್ಲಾ ರಾಷ್ಟ್ರಗಳ ಹಜ್ಜಾಜಿಗಳ ಸಮಸ್ಯೆಗಳಿಗೆ ಸ್ಪಂದಿಸಲಿದ್ದು, ಮಸ್ಜುದುಲ್ ಹರಮ್ ಸೇರಿದಂತೆ ವಿವಿದ ಕಡೆಗಳಲ್ಲಿ ಅನಾರೋಗ್ಯದಿಂದ ಬಳಲುವ ಹಾಗೂ ತಮ್ಮ ವಸತಿಗಳಿಗೆ ಮರಳಲು ದಾರಿ ತಿಳಿಯದೇ ಆತಂಕಕ್ಕೆ ಒಳಗಾಗುವ ನಿಸ್ಸಹಾಯಕ ಹಾಜಿಗಳಿಗೆ ಮಾರ್ಗದರ್ಶನ ನೀಡಲು ಕೆಸಿಎಫ್ ನ HVC ಸ್ವಯಂ ಸೇವಕರು ಮಕ್ಕಾ ಹಾಗೂ ಮದೀನಾದಲ್ಲಿ ನಿರಂತರ ಸೇವೆಯಲ್ಲಿರುತ್ತಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...