Thursday, February 13, 2025

ಕುಡಿಯುವ ನೀರಿನ ಸಮಸ್ಯೆ ಬರಕೂಡದು: ರಾಜಣ್ಣ

ಬಂಟ್ವಾಳ: ಫೆಬ್ರವರಿ ತಿಂಗಳಾಂತ್ಯಕ್ಕೆ ತಾಲೂಕಿನ ಕೆಲ ಭಾಗಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದ್ದು, ಸಮಸ್ಯೆ ಪರಿಹಾರಕ್ಕೆ ಈಗಿಂದಲೇ ಕಾರ್ಯನಿರ್ವಹಿಸುವಂತೆ ತಾಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯು ಬಿ.ಸಿ.ರೋಡ್ ನ ತಾಪಂ ಎಸ್ ಜಿ ಎಸ್ ವೈ ಸಭಾಂಗದಲ್ಲಿ ಮಂಗಳವಾರ ನಡೆಯಿತು.
ಕುಡಿಯುವ ನೀರಿನ ಅಭಾವವಿರುವ ಗ್ರಾಮದಲ್ಲಿ ಜಿಪಂ ಅನುದಾನ ಬಳಸಿ ಹೊಸ ಕೊಳವಿ ಬಾವಿಯನ್ನು ನಿರ್ಮಿಸಿ. ಅಲ್ಲದೆ, ಪಾಲುಬಿದ್ದ ಕೊಳವೆ ಬಾವಿಯನ್ನು ನವೀಕರಿಸುವ ಅಥವಾ ಇನ್ನೊಂದು ಕಡೆ ಜೋಡಿಸುವ ಕಾಮಗಾರಿಯನ್ನು ನಡೆಸುವಂತೆ ತಾಪಂ ಇಒ ರಾಜಣ್ಣ ಅವರು ಮೆಸ್ಕಾಂ ಅಧಿಕಾಗಳಿಗೆ ಸೂಚನೆ ನೀಡಿದರು.


ಬಂಟ್ವಾಳ ಅರಣ್ಯ ವಲಯಾಧಿಕಾರಿ ಸುರೇಶ್ ಸಭೆಗೆ ಮಾಹಿತಿ ನೀಡಿ, ಅರಣ್ಯ ಇಲಾಖೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಎಸ್ಸಿ, ಎಸ್ಟಿ ಹಾಗೂ ಅರಣ್ಯ ಪ್ರದೇಶದ ನಿವಾಸಿಗಳಿಗೆ ಎಲ್ಪಿಜಿ ಗ್ಯಾಸ್ ಸೌಲಭ್ಯವಿದ್ದು, ಈ ಬಗ್ಗೆ 50 ಗ್ರಾಮಗಳಿಗೆ ಅರ್ಜಿ ಸಹಿತ ಮಾಹಿತಿ ನೀಡಲಾಗಿದೆ. ಆದರೆ, 4 ಗ್ರಾಮಗಳ 17 ಅರ್ಜಿಗಳು ಮಾತ್ರ ಬಂದಿವೆ ಎಂದು ತಿಳಿಸಿದರು.
ಅರಣ್ಯ ಪ್ರದೇಶದಲ್ಲಿರುವ ಗ್ರಾಮಗಳಿಗೆ ಎಸ್ಸಿ, ಎಸ್ಟಿ ಗ್ಯಾಸ್ ಯೋಜನೆಯ ಫಲಾನುಭವಿಗಳ ಆಯ್ಕೆಯ ಬಗ್ಗೆ ಅಧ್ಯಕ್ಷರಿಗೆ ಜವಾಬ್ದಾರಿ ನೀಡಿ, ಮತ್ತೊಮ್ಮೆ ಪರಿಶೀಲನೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಮಾಡಲಾಯಿತು.
ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು ಸಭೆಗೆ ಮಾಹಿತಿ ನೀಡಿ, ಬಂಟ್ವಾಳದಲ್ಲಿ ಮಂಗನ ಸಾವು, ಕಾಯಿಲೆ ಪ್ರಕರಣಗಳು ಇದುವರೆಗೂ ಪತ್ತೆಯಾಗಿಲ್ಲ. ಈ ಬಗ್ಗೆ ಪ್ರತೀ ಗ್ರಾಮ ಮಟ್ಟದಲ್ಲಿ ಅರಣ್ಯ, ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ನಿಂತರವಾಗಿ ಜಾಗೃತಿ ಕಾರ್ಯಾಗಾರ ನಡೆಯುತ್ತಿದೆ ಎಂದರು.
ಮುಂಜಾಗೃತಾ ಕ್ರಮವಾಗಿ ಅರಣ್ಯ ಸಿಬ್ಬಂದಿ, ಕಾಡಂಚಿನ ಪ್ರದೇಶದ ಜನರನ್ನು ಗುರುತಿಸಿ ಮೈಗೆ ಹಚ್ಚುವ ರೋಗ ನಿರೋಧಕ ಡಿಎಂಪಿ ಆಯಿಲ್ ಅನ್ನು ವಿತರಣೆ ಮಾಡಲಾಗಿದೆ. ಕಾರಿಂಜ ಸಹಿತ ತಾಲೂಕಿನ ಇತರ ಭಾಗದಲ್ಲಿ ಕಾರ್ಯಾಚರಣೆ ನಡೆಸಿ,
ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ರಕ್ತ ಮಾದರಿ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಸಂಬಂಧಿಸಿ, ಚರ್ಚೆ ನಡೆಯಿತು.
ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ತಹಶೀಲ್ದಾರ್ ರಶ್ಮಿ ಕಿಶೋರ್ ಉಪಸ್ಥಿತರಿದ್ದು, ಸಲಹೆ ನೀಡಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ ಹಾಜರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...