Wednesday, February 12, 2025

ಕೆಲಿಂಜ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಅಡಕೆ ಬೆಂಕಿಗಾಹುತಿ

 

ವಿಟ್ಲ: ವಿಟ್ಲದ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿ ಶಾರ್ಟ್ ಸರ್ಕಿಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆ ಭಾಗಶಃ ಹಾನಿಗೊಂಡಿದ್ದು, ಏಳು ಲಕ್ಷ ರೂ. ಬೆಲೆಬಾಳುವ ಅಡಕೆ ಸುಟ್ಟು ಕರಲಾದ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕೆಲಿಂಜ ನಿವಾಸಿ ಜೂಲಿಯಾನ್ ಪಾಯಸ್ ಅವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಇವರ ಮನೆಯ ಒಂದು ಭಾಗ ಸ್ಲ್ಯಾಪ್‌ನಿಂದ ಇನ್ನೊಂದು ಭಾಗ ಹಂಚು ಪಕ್ಕಾಸ್‌ನಿಂದ ನಿರ್ಮಿಸಲಾಗಿದೆ. ಮಧ್ಯರಾತ್ರಿ ಮನೆಯ ಒಳಗಡೆ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಹಂಚಿನ ಛಾವಣಿಯಲ್ಲಿ ಒಣಗಿಸಲು ಇಟ್ಟಿದ್ದ ಒಣ ಅಡಕೆ ಸುಟ್ಟು ಕರಕಲಾಗಿದೆ. ಹಂಚಿನ ಭಾಗದ ನಾಲ್ಕು ಕೋಣೆಗಳಿಗೂ ಬೆಂಕಿ ಆವರಿಸಿಕೊಂಡು ವಸ್ತುಗಳು ಕರಕಲಾಗಿದೆ.
ಮನೆಯಲ್ಲಿ ಆರು ಮಂದಿ ಬೇರೆ ಬೇರೆ ಕೋಣೆಯಲ್ಲಿ ಮಲಗಿದ್ದರು. ಬೆಳಗ್ಗೆ ೫ ಗಂಟೆ ವೇಳೆ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಮನೆಮಂದಿ ಎಲ್ಲಾ ಬೆಂಕಿ ನಂದಿಸಲು ಮುಂದಾಗಿದ್ದು, ಈ ಸಂದರ್ಭ ಇಬ್ಬರು ಗಾಯಗೊಂಡಿದ್ದಾರೆ. ಹೆಚ್ಚಿನ ಅನಾಹುತ ಸಂಭವಿಸಿದಂತೆ ಅನಿಲ ಸಿಲಿಂಡರ್‌ಗಳನ್ನು ಹೊರಗಡೆ ಎಸೆಯಲಾಗಿದೆ. ಅಷ್ಟೊತ್ತಿಗೆ ಮನೆಯ ಪಕ್ಕಾಸು, ಅದರ ಮುಚ್ಚಿಗೆ, ಚಯರ್‌ಗಳು, ಫ್ಯಾನ್, ಕಪಾಟು, ಸೇರಿದಂತೆ ಮನೆಯ ವೈಯರಿಂಗ್ ಸಂಪೂರ್ಣವಾಗಿ ನಾಶ ಹೊಂದಿದೆ. ಎರಡು ವರ್ಷಗಳ ಕಾಲ ಇಟ್ಟಿದ್ದ ಏಳು ಲಕ್ಷ ರೂ. ಬೆಲೆಬಾಳುವ ಅಡಕೆ ರಾಶಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡದಿಂದ ಒಟ್ಟು ಅಂದಾಜು ೧೨ ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

More from the blog

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...