Monday, July 14, 2025

ಬಂಟ್ವಾಳ: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಬಂಟ್ವಾಳ: ವಿಜಯ ನಗರ ಸಾಮ್ರಾಜ್ಯದ ರಾಜಧಾನಿಯನ್ನು ನೋಡಿದ ಕೆಂಪೇಗೌಡರಿಗೆ ತಮ್ಮ ನಾಡಿನಲ್ಲಿ ಅಂತಹ ನಗರ ನಿರ್ಮಿಸುವ ಕನಸು ಮೂಡಿತು. ಅವರ ಛಲ ಪ್ರಯತ್ನಗಳಿಂದ ಇಂದಿಗೂ ನಾಡ ಪ್ರಭುವೆಂದು ಬಿರುದು ಪಡೆದಿದ್ದಾರೆ.


ಶನಿವಾರ ಬಿ.ಸಿ. ರೋಡಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಕಂದಾಯ ಶಿರಸ್ತೇದಾರ್ ರಾಜೇಶ್ ನಾಯ್ಕ್ ಅವರು ಹೇಳಿದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮಾತನಾಡಿ, ಕೆಂಪೇಗೌಡರು ನಮ್ಮ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ. ಇದು ಇಂದು ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿ ಮೂಡಿ ಬಂದಿದೆ. ಕೆಂಪೆಗೌಡರ ದೂರದೃಷ್ಟಿ ಅದಕ್ಕಾಗಿ ಹಣವನ್ನು ಕ್ರೋಡೀಕರಿಸಿದ ರೀತಿ ಇವೆಲ್ಲವೂ ನಮಗೆ ಮಾದರಿಯಾಗಿವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ,  ವಂದಿಸಿದರು.

More from the blog

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಬಂಟರ ಸಂಘ ನರಿಕೊಂಬು – ಶಂಭೂರು ಅಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ ಪುನರಾಯ್ಕೆ..

ಬಂಟ್ವಾಳ: ನರಿಕೊಂಬು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ ಅವರು ಬಂಟರ ಸಂಘ ನರಿಕೊಂಬು- ಶಂಭೂರು ಗ್ರಾಮ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಆಗಿದ್ದಾರೆ. ಜು. 10 ರಂದು ಕರ್ಬೆಟ್ಟು ಭಾಸ್ಕರ ಶೆಟ್ಟಿ ವಸತಿಗ್ರಹದಲ್ಲಿ...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ..

ಮಂಗಳೂರು : ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ...