Wednesday, January 28, 2026

ಮಾ.2: ಸಂಪರ್ಕ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ದ.ಸೇ. ಸಮಿತಿಯಿಂದ ಪ್ರತಿಭಟನೆ

ವಿಟ್ಲ: ಕೇಪು ಗ್ರಾಮದ ಅಜ್ಜಿನಡ್ಕ ಎಂಬಲ್ಲಿಯ ಕೊರಗರ ಮನೆಗಳಿಗೆ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಮಾರ್ಚ್ 2ರಂದು ದ.ಕ ದಲಿತ್ ಸೇವಾ ಸಮಿತಿ ವತಿಯಿಂದ ಕೇಪು ಗ್ರಾಮ ಪಂಚಾಯಿತಿ ವಠಾರದಲ್ಲಿ ಟೆಂಟ್ ನಿರ್ಮಿಸಿ ವಾಸ್ತವ್ಯ ಹೂಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು.
ಅವರು ವಿಟ್ಲದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಜ್ಜಿನಡ್ಕ ಎಂಬಲ್ಲಿರುವ ಮೂರು ಕೊರಗರ ಮನೆಗಳಿಗೆ ಮತ್ತು ಅಂಗವಿಕಲ ಕೃಷ್ಣಪ್ಪ ಅವರ ಮನೆಗಳಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸಲಾಗಿದೆ. ಪ್ರತಿಭಟನೆಯೂ ನಡೆಸಲಾಗಿದೆ. ಪರಿಶಿಷ್ಟ ಜಾತಿ ಕುಂದುಕೊರತೆ ಸಭೆಯಲ್ಲಿ ತಿಳಿಸಿದರೂ ಯಾವುದೇ ನ್ಯಾಯ ಒದಗಿಸಿಲ್ಲ. ಈ ಹಿನ್ನೆಲೆಯಲ್ಲಿ ಫೆ.29ರೊಳಗೆ ನ್ಯಾಯ ಒದಗಿಸದಿದ್ದಲ್ಲಿ ಮಾರ್ಚ್ 2ರಂದು ಮೂರು ಕುಟುಂಬಗಳು ಹಾಗೂ ಕೃಷ್ಣಪ್ಪ ಅವರನ್ನು ಗ್ರಾಮ ಪಂಚಾಯಿತಿ ವಠಾರದಲ್ಲಿ ಟೆಂಟ್ ಹಾಕಿ ಪ್ರತಿಭಟನೆ ನಡೆಸುವ ಮೂಲಕ ವಾಸ್ತವ್ಯ ಹೂಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ನಾಗೇಶ್, ಬಂಟ್ವಾಳ ತಾಲ್ಲೂಕು ಅಧ್ಯಕ್ಷ ಗಣೇಶ್ ಸೀಗೆಬಲ್ಲೆ, ಮಂಗಳೂರು ತಾಲ್ಲೂಕು ಗೌರವಾಧ್ಯಕ್ಷ ಜಗದೀಶ, ರಮೇಶ್ ಅಜ್ಜಿನಡ್ಕ ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...