Wednesday, February 12, 2025

’ಧರ್ಮಕ್ಷೇತ್ರದಲ್ಲಿ ಲೆಕ್ಕ ಮೀರಿ ಗಳಿಸಲು ಸಾಧ್ಯ’- ರಾಘವೇಶ್ವರಶ್ರೀ

ಕೇಪು : ಲೌಕಿಕ ಜೀವನದಲ್ಲಿ ಲೆಕ್ಕಮೀರಿ ಗಳಿಸುವುದಕ್ಕೆ ಅವಕಾಶವಿಲ್ಲ. ಆದರೆ ಧರ್ಮಕ್ಷೇತ್ರದಲ್ಲಿ ಲೆಕ್ಕ ಮೀರಿ ಗಳಿಸಲು ಸಾಧ್ಯವಿದೆ. ಅದು ಪರಲೋಕದಲ್ಲಿ ಪರಿಗಣಿಸಲ್ಪಡುತ್ತದೆ. ಅದಕ್ಕೆ ಭಗವಂತನ ಅನುಗ್ರಹವಿರುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.
ಅವರು ಶುಕ್ರವಾರ ಕೇಪು ಖಂಡಿಗ ಶ್ರೀ ಕೈಲಾಸೇಶ್ವರ ದೇವ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ದೇವಾಲಯದಲಿಶ್ರೀ ಅಯ್ಯಪ್ಪ ಸ್ವಾಮಿ ದೇವರ ಪ್ರತಿಷ್ಠಾ ಬ್ರಹ್ಮಕಲಶದ ಬಳಿಕ ನಡೆದ ಧಾರ್‍ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಬದುಕಿನ ಶ್ರಮ, ಸಾಧನೆ, ಸಂಪಾದನೆಯೆಲ್ಲವೂ ಕ್ಷೇತ್ರ ನಿರ್‍ಮಾಣಕ್ಕೆ ಸಂದಿದೆ. ಸಮಾಜ ಗುರುತಿಸುವ ಕಾರ್‍ಯವಾಗಿದೆ. ಇಲ್ಲಿ ಶಿವನ ಸಾನ್ನಿಧ್ಯವಿದೆ. ಅಯ್ಯಪ್ಪ ಸ್ವಾಮಿ ದೇವರ ಸಾನ್ನಿಧ್ಯವೂ ಸಿಕ್ಕಿದೆ. ಇದೀಗ ಗೋಶಾಲೆಯೂ ನಿರ್‍ಮಾಣವಾಗಿದೆ. ೩೩ ಕೋಟಿ ದೇವತೆಗಳ ಆವಾಸಸ್ಥಾನದ ಸಾನ್ನಿಧ್ಯವೂ ಸೇರ್ಪಡೆಯಾಗುತ್ತದೆ. ಈ ಗೋಶಾಲೆಯಲ್ಲಿ ಗೋವುಗಳು ತುಂಬಬೇಕು. ಈ ಗೋಶಾಲೆಗೆ ರಾಮಚಂದ್ರಾಪುರ ಮಠದಿಂದ ಗೋವುಗಳನ್ನು ಕೊಡುಗೆಯಾಗಿ ನೀಡಲಾಗುತ್ತದೆ ಎಂದು ಹೇಳಿದರು.
ಬ್ರಹ್ಮಶ್ರೀ ವೇ.ಮೂ.ಪಳ್ಳತ್ತಡ್ಕ ಪರಮೇಶ್ವರ ಭಟ್, ಮಾಡಾವು ವೆಂಕಟ್ರಮಣ ಜೋಯಿಸರು, ಮಹಾಮಂಡಲ ಅಧ್ಯಕ್ಷೆ ಈಶ್ವರೀ ಶ್ಯಾಮ ಭಟ್ ಬೇರ್ಕಡವು, ಕಾರ್‍ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು, ಆರ್.ಡಿ.ಶಾಸ್ತ್ರಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಉಪಸ್ಥಿತರಿದ್ದರು.
ಆಡಳಿತ ಮೊಕ್ತೇಸರ ರವೀಶ್ ಕೆ.ಎನ್.ಖಂಡಿಗ ಸ್ವಾಗತಿಸಿದರು. ಜನಾರ್ದನ ಭಟ್ ಅಮೈ ನಿರೂಪಿಸಿ, ವಂದಿಸಿದರು.
ಬೆಳಗ್ಗೆ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಪ್ರತಿಷ್ಠಾ ಕಾರ್‍ಯ ನಡೆಯಿತು. ಬಳಿಕ ಕಲಶಾಭಿಷೇಕ, ಶತ ರುದ್ರಾಭಿಷೇಕ, ಕಲ್ಫೋಕ್ತ ಪೂಜೆ, ನಾನಾ ತಂಡಗಳಿಂದ ಭಜನಾ ಕಾರ್‍ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಬಳಿಕ ಅಡ್ಯನಡ್ಕ ಹವ್ಯಾಸಿ ಯಕ್ಷಕಲಾ ಸಂಘ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ’ಭಸ್ಮಾಸುರ ಮೋಹಿನಿ’ – ’ಶಬರಿಮಲೆ ಅಯ್ಯಪ್ಪ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

More from the blog

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...