Saturday, January 31, 2026

ಕೇಪು: ತಾ. ಮಟ್ಟದ ಕ್ರೀಡಾಕೂಟ ಪೂರ್ವಭಾವಿ ಸಭೆ: ಗಣಕಯಂತ್ರ ಉದ್ಘಾಟನೆ

ವಿಟ್ಲ: ಕೇಪು ಕಲ್ಲಂಗಳ ಸರಕಾರಿ ಪ್ರೌಢಶಾಲೆಯಲ್ಲಿ 2019-20ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾ ಕೂಟ ಮತ್ತು ಕ್ರೀಡಾಂಗಣ ನಿರ್ಮಾಣದ ಪ್ರಯುಕ್ತ ಸಭೆ, ಆಟಿ ಕೂಟ ಕಾರ್ಯಕ್ರಮ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಸರಕಾರದಿಂದ ನೀಡಲ್ಪಟ್ಟ ೧೧ ನೂತನ ಗಣಕಯಂತ್ರಗಳನ್ನು ನೂತನ ಗಣಕಯಂತ್ರಗಳ ಉದ್ಘಾಟನೆ ನಡೆಯಿತು.
ಸಂಜೀವ ಮಠಂದೂರು ಮಾತನಾಡಿ ಶಿಕ್ಷಣದಲ್ಲಿ ನೈತಿಕ ಮತ್ತು ಬೌದ್ಧಿಕ ಶಿಕ್ಷಣವನ್ನು ಬೆಳೆಸಿಕೊಳ್ಳಬೇಕು. ಶಾಲಾ ಮಕ್ಕಳ ಫಲಿತಾಂಶದಲ್ಲಿ ಶೇ. ನೂರು ಬರುವ ಹಾಗೆ ಪ್ರಯತ್ನಿಸಬೇಕು. ಶಾಲೆಯ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಭರಿಸುತ್ತೇನೆ ಎಂದರು.
ರಾಧಾಕೃಷ್ಣ ಚೆಲ್ಲಡ್ಕ ಆಟಿಯ ಕೂಟದ ಹಲವು ವಿಶೇಷ ಮಾಹಿತಿಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂ.ಸದಸ್ಯರಾದ ಜಯಶ್ರೀ ಕೋಡಂದೂರು, ಗ್ರಾ.ಪಂ ಅಧ್ಯಕ್ಷರಾದ ತಾರಾನಾಥ ಆಳ್ವ, ಪ್ರಭಾಕರಶೆಟ್ಟಿ ದಂಬೆಕಾನ, ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಬಾಲಚಂದ್ರ ಕೆ, ರಾಜ್ಯ ಪುರಸ್ಕೃತ ರಮೇಶ ಎಂ ಬಾಯರ್, ಗ್ರಾ.ಪಂ. ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಈ ಸಭೆಯಲ್ಲಿ ಹಾಜರಿದ್ದರು.
ವಿದ್ಯಾರ್ಥಿನಿಗಳಾದ ತ್ರಿಶಾಲಿ ಕುಮಾರಿ. ಪ್ರತೀಕ್ಷ ಮತ್ತು ಗೀತಾ ಪ್ರಾರ್ಥಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ವರದಿಯ ಜೊತೆಗೆ ಸ್ವಾಗತಿಸಿದರು. ಲಕ್ಷ್ಮಣ್ ಟಿ.ನಾಯ್ಕ ವಂದಿಸಿದರು. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.

 

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...