Wednesday, July 9, 2025

ಕೇಪು: ಶಾಲಾ ಆರಂಭೋತ್ಸವ, ವಿದ್ಯಾರ್ಥಿಗಳಿಗೆ ಸ್ವಾಗತ

ವಿಟ್ಲ: ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಕೇಪು ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘ, ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಶಾಲಾ ಆರಂಭೋತ್ಸವ ಸಮಾರಂಭ ನಡೆಯಿತು.
ಸಭಾ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಮಾತನಾಡಿ ಊರಿನ ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕರ ಸಮಾನ ಮನಸ್ಕರಾಗಿ ಹುಮ್ಮಸ್ಸಿನಿಂದ ಮುನ್ನಡೆದಾಗ ಶಾಲೆ ಉಜ್ವಲವಾಗಿ ಬೆಳೆಯಬಹುದು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೇಪು ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘದ ಸಂಚಾಲಕ ಅಶೋಕ್ ಕುಮಾರ್ ಇರಾಮೂಲೆ ಮಾತನಾಡಿ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳು ಸರ್ವತೋಮುಖವಾಗಿ ಬೆಳೆಯುವ ವಾತಾವರಣ ಸೃಷ್ಟಿಯಾದಾಗ ಸರಕಾರಿ ಶಾಲೆಗಳತ್ತ ಹೆತ್ತವರ ಚಿತ್ತ ಹರಿಯಬಹುದು. ಈ ಸಾಲಿನಿಂದ ಎಲ್‌ಕೆಜಿಯುಕೆಜಿ ತರಗತಿಗಳು ಆರಂಭವಾಗಲಿದ್ದು, ಎಲ್ಲಾ ರೀತಿಯ ಸೌಕರ್‍ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯೆ ಕವಿತಾ ಎಸ್.ನಾಯ್ಕ, ನೋಟರಿ ವಕೀಲ ಶ್ರೀಕೃಷ್ಣ, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಶೀನ ನಾಯ್ಕ ಕಲ್ಲಾಪು, ಕೇಪು ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಕಾರ್‍ಯಾಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಎಸ್‌ಡಿಎಂಸಿ ಅಧ್ಯಕ್ಷ ರವಿ ಗೌಡ ಕೊರತಿಗದ್ದೆ ಭಾಗವಹಿಸಿದ್ದರು.
ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಸರೋಜ ಕೆ. ವಂದಿಸಿದರು. ಸಹ ಶಿಕ್ಷಕಿ ಚಿನ್ನಮ್ಮ ಕಾರ್‍ಯಕ್ರಮ ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...