Friday, January 30, 2026

ಒಡಿಯೂರು ಶ್ರೀಗಳ ಜನ್ಮದಿನೋತ್ಸವ: ಕೇಪು ಗ್ರಾಮದಲ್ಲಿ ಸ್ವಚ್ಚತೆ

ವಿಟ್ಲ: ಒಡಿಯೂರುಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮ ದಿನೋತ್ಸವದ ಅಂಗವಾಗಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೇಪು ಘಟ ಸಮಿತಿ ವತಿಯಿಂದ ಕೇಪು ಗ್ರಾಮ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಗ್ರಾಮಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ತುಂಬಾ ಒಳ್ಳೆಯ ವಿಚಾರ. ಪ್ಲಾಸ್ಟಿಕ್ ದೇಶದ ಅತಿದೊಡ್ಡ ಸಮಸ್ಯೆ. ಇವು ಮಣ್ಣಿನಲ್ಲಿ ಕರಗಿ ಹೋಗುವುದಿಲ್ಲ. ಇದನ್ನು ದೂರ ಇಡುವುದು ನಾವೆಲ್ಲರೂ ಮಾಡಬೇಕಾದ ಮೊಟ್ಟ ಮೊದಲ ಕೆಲಸ. ನಮ್ಮ ಮನ-ಮನೆ ಪರಿಸರವನ್ನು ಪ್ರತಿನಿತ್ಯ ಸ್ವಚ್ಛವಾಗಿಟ್ಟುಕೊಳ್ಳುವವರು ನಾವಾಗಬೇಕು, ಪ್ರತಿಯೊಬ್ಬರು ಸ್ವಚ್ಛತೆಯನ್ನು ಕಾಪಾಡುವಲ್ಲಿ ಕೈಜೋಡಿಸಬೇಕು ಎಂದು ಕಾರ್‍ಯಕ್ರಮ ಉದ್ಘಾಟಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ಅಡ್ಯನಡ್ಕ ಇದರ ಆರೋಗ್ಯ ಸಹಾಯಕಿಯಾದ ಮಮತ ತಿಳಿಸಿದರು.
ಈ ಸಂದರ್ಭದಲ್ಲಿ ಘಟ ಸಮಿತಿ ಅಧ್ಯಕ್ಷರಾದ ಭವಾನಿ, ಉಪಾಧ್ಯಕ್ಷರಾದ ಸುನಂದ, ಸಂಘಟನಾ ಕಾರ್‍ಯದರ್ಶಿ ಕುಸುಮ, ಲೆಕ್ಕಪರಿಶೋಧಕಿ ರೇಶ್ಮಾ, ಸೇವಾದೀಕ್ಷಿತರಾದ ವಾರಿಜ, ಗೀತಾ ಉಪಸ್ಥಿತರಿದ್ದರು.
ಸಂಘದ ಸದಸ್ಯರಾದ ನಳಿನಾಕ್ಷಿಯವರು ಸ್ವಾಗತಿಸಿದರು. ಜಯಂತಿ ವಂದಿಸಿದರು. ಸಂಘಟನಾ ಕಾರ್‍ಯದರ್ಶಿ ಕುಸುಮ ಕಾರ್‍ಯಕ್ರಮವನ್ನು ನಿರೂಪಿಸಿದರು. ಘಟ ಸಮಿತಿ ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ಆದರ್ಶ ಯುವಕಮಂಡಲದ ಸದಸ್ಯರು ಸಹಕರಿಸಿದರು.

 

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...