Tuesday, July 8, 2025

ಗಡಿ ಸಮಸ್ಯೆ: ಬಾಕಿಯಾಗಿದ್ದ ವಿದ್ಯಾರ್ಥಿಗೆ ಶಿಕ್ಷಕರ ನೆರವು: ಸಕಾಲಕ್ಕೆ ಪರೀಕ್ಷೆ ಬರೆದ ವಿದ್ಯಾರ್ಥಿ

ಬಂಟ್ವಾಳ: ಗಡಿ ಸಮಸ್ಯೆ ಯ ಹಿನ್ನೆಲೆಯಲ್ಲಿ ಬಾಕಿಯಾಗಿದ್ದ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿ ಯೋರ್ವನನ್ನು ಸಮಯಕ್ಕೆ ಸರಿಯಾಗಿ ಪರೀಕ್ಷೆ ಗೆ ಹಾಜರಾಗಲು ಶಿಕ್ಷಕರ ಪ್ರಯತ್ನಕ್ಕೆ ಫಲ ಸಿಕ್ಕಿದೆ.

ಘಟನೆ ಏನಾಗಿದೆ ಗೊತ್ತೇ..?

ಎಸ್.ಎಸ್.ಎಲ್.ಸಿ. ಕನ್ನಡ ಪರೀಕ್ಷೆ ದಿನ ಮುಡಿಪು ಪರೀಕ್ಷಾ ಕೇಂದ್ರಕ್ಕೆ ಪ್ರತಿ ದಿನ ಸಮಯಕ್ಕೆ ಸರಿಯಾಗಿ ಕಳೆದ ಎಲ್ಲಾ ಪರೀಕ್ಷೆಗೂ ಹಾಜರಾಗಿದ್ದ ಸ.ಪ್ರೌ ಸಾಲೆತ್ತೂರಿನ ಬಂಟ್ವಾಳ ಶಾಲೆಯ ವಿದ್ಯಾರ್ಥಿ ತಂಝೀರ್‍ ಇವನು ಸಮಯ ೯ ೩೦ಆದರು ಹಾಜರಾಗಿರಲಿಲ್ಲ.
ಪ್ರತಿ ದಿನ ಆತ ಸ್ವಂತ ವಾಹನದಲ್ಲಿ ಮನೆಯವರ ಜೊತೆ ಬಂದಿರುತ್ತಿದ್ದ ಆತನ ಗೆಳೆಯರು ತಂಝೀರ್‍ ಬರದಿರುವ ಬಗ್ಗೆ ಕೇರಳದ ಬಸ್ ವ್ಯವಸ್ಥೆಯ ನೋಡಲ್ ಆದ ವಿನಾಯಕ ನಾಯಕ ಮತ್ತು ರಾಘವೇಂದ್ರ ಅವರಿಗೆ ತಿಳಿಸಿದ ನಂತರ ಮನೆಯವರ ಸಂಪರ್ಕ ಮಾಡಲಾಯಿತು, ಅವರು ನೀಡಿದ ಎರಡು ನಂಬರ್‍ ಸ್ವಿಚ್ ಆಫ್ ಬರುತ್ತಿತ್ತು. ನಂತರ ಸಂಬಂಧಿಕರ ದೂರವಾಣಿ ಸಂಖ್ಯೆ ಸಿಕ್ಕಿದ್ದು, ಅವನು ಮನೆಯಿಂದ ಹೊರಟಿರುವುದಾಗಿ ತಿಳಿಸಿದರು. ಆತ ಪ್ರತಿ ದಿನ ಬರುತ್ತಿದ್ದ ಹೂ ಹಾಕುವ ಕಲ್ಲು ದಾರಿ ಅಲ್ಲದೇ ನಂದ್ರಬೈಲು ಕೈರಂಗಳ ದಾರಿ ಮತ್ತು ಪಾತೂರು ಬಾಕ್ರಬೈಲ್ ರಸ್ತೆಗಳಲ್ಲಿ ಎಲ್ಲಾ ರೀತಿಯ ಪ್ರವೇಶ ಮುಚ್ಚಿರುವ ಕಾರಣ ವಿದ್ಯಾರ್ಥಿ ದಾರಿ ತಪ್ಪಿದಲ್ಲದೇ ಶಿಕ್ಷರಿಗೆ ವಿದ್ಯಾರ್ಥಿಯೊಡನೆ ಸಂಪರ್ಕ ಸಾಧಿಸಲು ಅಸಾಧ್ಯವಾಯಿತು. ಶಿಕ್ಷಕರಿಬ್ಬರು ಎಲ್ಲಾ ಗಡಿಗಳಿಗೂ ಸ್ವಂತ ವಾಹನದಲ್ಲಿ ಹೋಗಿ ಪರಿಶೀಲಿಸಿದಾಗ ಶಾಲಾ ಸಮವಸ್ತ್ರಧರಿಸಿರುವ ವಿದ್ಯಾರ್ಥಿ ಮತ್ತು ಆತನ ಅಣ್ಣನೊಂದಿಗೆ ಬರುತ್ತಿರುವ ದಾರಿ ಬಗ್ಗೆ ತಕ್ಷಣ ಮಾಹಿತಿ ಸಾರ್ವಜನಿಕರಿಂದ ಶಿಕ್ಷಕರಿಗೆ ದೊರಕಿತು. ಶಿಕ್ಷರಿಬ್ಬರು ಮತ್ತೇ ನಾರ್ಯ ಗಡಿಗೆ ತಲುಪಿ ಪೊಲೀಸರಲ್ಲಿ ವಿನಂತಿಸಿ ವಿದ್ಯಾಥಿಯನ್ನು ತಡೆಗೋಡೆ ದಾಟಿಸಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರವನ್ನು ತಲುಪಲು ಯಶಸ್ವಿಯಾದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...