Sunday, January 25, 2026

ಮಡಿಕೇರಿ ಮಾದರಿಯಲ್ಲಿ ಜಿಲ್ಲೆಗೆ ಪರಿಹಾರ ನೀಡಲು ಮುಖ್ಯಮಂತ್ರಿಗೆ ಒತ್ತಾಯ: ಯು.ಟಿ.ಖಾದರ್

ಬಂಟ್ವಾಳ: ನೆರೆ ಸಂತ್ರಸ್ತರಿಗೆ ಪಾಕೃತಿಕ ವಿಕೋಪದಡಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುದು, ತುಂಬೆ ಹಾಗೂ ಸಜೀಪ ನಡು ಗ್ರಾ.ಪಂ.ವ್ಯಾಪ್ತಿಯ ಸುಮಾರು 56 ಫಲಾನುಭವಿಗಳಿಗೆ ಸರಕಾರದಿಂದ ನೀಡಿದ ಹತ್ತು ಸಾವಿರ ರೂ ಮೊತ್ತದ ಚೆಕ್ ವಿತರಣೆಯನ್ನು ಪುದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಮಾಜಿ ಸಚಿವ ಯು.ಟಿ.ಖಾದರ್ ನಡೆಸಿದರು.
ಬಳಿಕ ಮಾತನಾಡಿ ಮಡಿಕೇರಿಯಲ್ಲಿ ಕಳೆದ ಬಾರಿ ಪಾಕೃತಿಕ ಹಾನಿಗೆ ಸರಕಾರ ನೀಡಿದ ಮಾದರಿಯಲ್ಲಿ ಇಲ್ಲಿಯೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಗೆ ಮನವಿ ಮಾಡಲಾಗಿದೆ, ಮುಖ್ಯ ಮಂತ್ರಿ ಮನವಿಗೆ ಸ್ಪಂದಿಸುವ ಭರವಸೆ ಇದೆ ಎಂದು ಅವರು ಹೇಳಿದರು.

 

ಪಾಕೃತಿಕ ವಿಕೋಪದಂತಹ ಘಟನೆಗಳ ಬಗ್ಗೆ ಮುಂಜಾಗ್ರತಾ ಕೈಗೊಳ್ಳಲು ಮುಂದಿನ ದಿನಗಳಲ್ಲಿ ಮಾಡಬೇಕಾದ ಅನಿವಾರ್ಯತೆ ಇದೆ.
ಮಳೆ ನೀರು ಹರಿದುಹೋಗಲು ಚರಂಡಿಯ ವ್ಯವಸ್ಥೆ ಗಳನ್ನು ಮಳೆ ಗಾಲ ಆರಂಭವಾಗುವ ಮೊದಲು ಮಾಡುವಂತೆ ಶಾಸಕರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪಾಕೃತಿಕ ವಿಕೋಪದಡಿಯಲ್ಲಿ ಸರಕಾರ ನೀಡುವ ಸವಲತ್ತುಗಳನ್ನು ಫಲಾನುಭವಿಗಳು ಪಡೆಯುವಂತೆ ವಿನಂತಿಸಿದರು.

ನೆರೆಯ ಸಂದರ್ಭದಲ್ಲಿ ಮತ್ತು ಬಳಿಕ ಪರಿಹಾರದ ಕಾರ್ಯದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಉತ್ತಮ ವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು.
ನೆರೆಯ ಸಂದರ್ಭದಲ್ಲಿ ಸಹಕಾರ ನೀಡಿದ ಸಂಘಸಂಸ್ಥೆಗಳ ನ್ನು ಗುರುತಿಸಿ ಅವರಿಗೆ ಸರಕಾರದ ವತಿಯಿಂದ ಪ್ರಶಸ್ತಿ ನೀಡಲು ಸರಕಾರದ ವತಿಯಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗ್ರಾಮ ಪಂಚಾಯತ್ ಅದ್ಯಕ್ಷ ರಮ್ಲಾನ್, ಜಿ.ಪಂ. ಸದಸ್ಯ ರವೀಂದ್ರ ಕಂಬಳಿ,ತಾಲೂಕು ಪಂಚಾಯತ್ ಸದಸ್ಯ ಗಣೇಶ್ ತುಂಬೆ, ತುಂಬೆ ಗ್ರಾ.ಪಂ.ಅಧ್ಯಕ್ಷೆ ಹೇಮಲತಾ ಜಿ. ಗ್ರಾಪಂ.ಸದಸ್ಯರಾದ
ನಜೀರ್ ಕುಂಜತ್ಕಲ, ರಿಯಾಜ್ ಕುಂಪಣಮಜಲು,ಮಹಮ್ಮದ್ ಮೋನು, ಅಬ್ದುಲ್ ಹಮೀದ್, ಭಾಸ್ಕರ ರೈ, ಅಕ್ತರ್ ಹುಸೇನ್, ಇಕ್ಬಾಲ್, ವೃಂದಾ ಪೂಜಾರಿ, ಯೋಗೀಶ್ ಪ್ರಭು, ಎಪ್.ಎಸ್.ಮಹಮ್ಮದ್ , ಪರಂಗಿಪೇಟೆ ಮಸೀದಿ ಅಧ್ಯಕ್ಷ ಮಹಮ್ಮದ್ ಭಾವ,
ತಹಶೀಲ್ದಾರ್ ರಶ್ಮಿ. ಎಸ್.ಆರ್, ಮಾಜಿ.ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ಮಾಜಿ ತಾ.ಪಂ.ಸದಸ್ಯ ಆಸೀಪ್ ಇಕ್ಬಾಲ್, ಪ್ರಮುಖರಾದ ಎಸ್ ಅಬುಬಕರ್ ಸಜೀಪ, ದಿನೇಶ್ ಶೆಟ್ಟಿ ಕೊಟ್ಟಿಂಜ, ಕೃಷ್ಣಕುಮಾರ್ ಪೂಂಜಾ, ಮಜೀದ್ ಪೆರಿಮಾರ್ , ಇಬ್ರಾಹಿಂ ವಳವೂರು, ಹಾತೀಕ್ ಪರಂಗಿಪೇಟೆ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ‌.ಡಿ.ಒ.ಪ್ರೇಮಲತಾ, ಕಾರ್ಯದರ್ಶಿ ಅಶ್ಬಿನಿ, ಸಿಬ್ಬಂದಿಗಳಾದ ಅಬ್ದುಲ್ ಸಲಾಂ, ವಿನಯ ಮತ್ತು ಯಶೋಧ ಉಪಸ್ಥಿತರಿದ್ದರು. ‌

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...