Saturday, July 12, 2025

ಕಿಟ್ ವಿತರಣೆ

ಬಂಟ್ವಾಳ: ಸರಕಾರ ಹಾಗೂ ಇತರ ಅನೇಕ ಸಂಘಟನೆಗಳು ಸಂಘಟಿತರಾಗಿ ದುಡಿದ ಪರಿಣಾಮ ದೇಶದಲ್ಲಿ ಕೋವಿಡ್ ಮಹಾಮಾರಿಯನ್ನು ಎದುರಿಸಲು ಸಾಧ್ಯವಾಯಿತು. ದೇಶದ ಪ್ರತಿ ಪ್ರಜೆಯ ಮೇಲಿನ ಕಾಳಜಿಯಿಂದ ಉಚಿತ ಲಸಿಕೆ ನೀಡುವ ಕಾರ್ಯ ನಡೆದಿದೆ. ಪಡಿ ಸಂಸ್ಥೆ ಯಿಂದ ಇನ್ನಷ್ಟು ಜನಪರ ಕಾರ್ಯಗಳು ಮೂಡಿಬಂದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಹೇಳಿದರು.

ಅವರು ಮಂಗಳವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿಯಲ್ಲಿ ಬಂಟ್ವಾಳ ಪುರಸಭಾ ವಾಪ್ತಿಯಲ್ಲಿ ಕೋವಿಡ್ ಬಾಧಿತರಿಗೆ ಪಡಿ ಸಂಸ್ಥೆಯ ವತಿಯಿಂದ ಕಿಟ್ ವಿತರಿಸಿ ಮಾತನಾಡಿದರು. ಕಿಟ್ ವಿತರಣೆ ಕಾರ್ಯ ಉತ್ತಮ ರೀತಿಯಲ್ಲಿ ನಡೆಯಲು ಸಹಕಾರ ನೀಡುವಂತೆ ಶಾಸಕ ರಾಜೇಶ್ ನಾಯ್ಕ್ ಅವರು ನಿರ್ದೇಶನ ನೀಡಿದ್ದಾರೆ ಎಂದರು.

ಹಿರಿಯ ರಂಗಕರ್ಮಿ ಮಂಜು ವಿಟ್ಲ ಮಾತನಾಡಿ, ಅಂದಿನ ಭೀಕರ ಖಾಯಿಲೆ ಏಡ್ಸ್ ವಿರುದ್ಧ ಜಾಗೃತಿ ಕಾರ್ಯವನ್ನು ನಡೆಸಿದ ಪಡಿ ಸಂಸ್ಥೆಯು ಎಲ್ಲಾ ರೋಗಿಗಳಲ್ಲೂ ಧೈರ್ಯ ತುಂಬುವ ಕಾರ್ಯ ಮಾಡಿತ್ತು. ಶಾಲೆಗಳಲ್ಲಿ ಎಸ್‌ಡಿಎಂಸಿ ಅಸ್ತಿತ್ವಕ್ಕೆ ಬಂದಾಗ ತಳ ಮಟ್ಟದಿಂದಲೇ ಜನರ ಜತೆ ಕೆಲಸ ಮಾಡಿದೆ. ಮುಂದೆಯೂ ಸಂಸ್ಥೆಯ ಎಲ್ಲಾ ಉತ್ತಮ ಕೆಲಸಗಳಿಗೆ ಶಾಸಕರು ಸಹಕಾರ ನೀಡುವ ಭರವಸೆ ಇದೆ ಎಂದರು.

ಪಡಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಲಲಿತಾ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ಪಡಿ ಸಂಸ್ಥೆಯು ರಾಜ್ಯದ 8 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳ ಹಕ್ಕಿನ ಕುರಿತು ಚುನಾಯಿತ ಜನಪ್ರತಿನಿಧಿ ಗಳಿಗೆ ಕಾರ್ಯಾಗಾರಗಳನ್ನು ನಡೆಸಿ ಮಾಹಿತಿ ನೀಡುತ್ತಿದೆ. ಸುಮಾರು 800 ಫಲಾನುಭವಿಗಳಿಗೆ ಕಿಟ್ ಕಿಟ್ ವಿತರಿಸುವ ಕಾರ್ಯ ನಡೆಸಿದೆ ಎಂದರು.

ಪಡಿಯ ವಿಭಾಗ ಸಂಯೋಜಕಿ ರಾಜೇಶ್ವರಿ ಸ್ವಾಗತಿಸಿ, ವಂದಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...