Wednesday, February 4, 2026

ಶಾಸಕರ ವೈಯಕ್ತಿಕ ನೆಲೆಯಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ 10 ಲಕ್ಷ ಮೌಲ್ಯದ ಸೌಲಭ್ಯ ವಿತರಣೆ

ಬಂಟ್ವಾಳ: ಶಾಸಕರ ವೈಯಕ್ತಿಕ ನೆಲೆಯಲ್ಲಿ ಒಟ್ಟು 10 ಲಕ್ಷ ಮೌಲ್ಯದ 25 ಆಕ್ಸಿಜನ್ ಸಿಲಿಂಡರ್ ಹಾಗೂ ಐಸಿಯು ಗೆ ಜನಕ್ ಬ್ರಾಂಡ್ ನ ಪೈ ಪಂಕ್ಸನ್ ಅತ್ಯಾಧುನಿಕ ಸೌಲಭ್ಯವಿರುವ 5 ಬೆಡ್ ಗಳನ್ನು ಬುಧವಾರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಕೋವಿಡ್ ಸೊಂಕಿತರಿಗೆ ಜಿಲ್ಲಾಡಳಿದಿಂದ ನೀಡಲ್ಪಡುವ ಮೆಡಿಕಲ್ ಕಿಟ್ ಗಳನ್ನು ಆಶಾಕಾರ್ಯಕರ್ತೆಯರಿಗೆ ನೀಡಿದರು.

ಬಳಿಕ ಮಾತನಾಡಿದ ಅವರು ಜಿಲ್ಲಾಡಳಿತವು ಕೊರೊನಾ ಸೊಂಕಿತರಿಗೆ, ಒಂದೇ ಕಿಟ್ ನೊಳಗೆ ಎಲ್ಲಾ ಸೌಕರ್ಯ ನೀಡುವ 10 ಸಾವಿರ ಕಿಟ್ ಗಳನ್ನು ಸಿದ್ದಪಡಿಸಿದೆ.

ಅದರಲ್ಲಿ 349 ಆಕ್ಸೀಮೀಟರ, ಬಂಟ್ವಾಳ ಕ್ಕೆ 1ಸಾವಿರ ಸೊಂಕಿತರ ಕಿಟ್ ಗಳು ಬಂಟ್ವಾಳ ಕ್ಕೆ ಬಂದಿವೆ.

ಸದ್ಯ ದಲ್ಲೆ ಅದನ್ನು ಆಶಾಕಾರ್ಯಕರ್ತೆಯರು ಮನೆಮನೆಗೆ ತಲುಪಿಸಲಿದ್ದಾರೆ.

ಈಗಾಗಲೇ ಬಂಟ್ವಾಳ ತಾಲೂಕಿನಲ್ಲಿ ಎರಡು ಆಕ್ಸಿಜನ್ ಘಟಕಗಳ ಕೆಲಸ ಪ್ರಗತಿಯಲ್ಲಿದ್ದು, ಬಂಟ್ವಾಳ ಸರಕಾರಿ ಆಸ್ಪ ತ್ರೆಗೆ ಕೊಯಮುತ್ತೂರಿನಿಂದ ಆಕ್ಸಿಜನ್ ಘಟಕ ಆಗಮಿಸುತ್ತಿದೆ.

ಬಂಟ್ವಾಳ ಸಮುದಾಯ ಆರೊಗ್ಯ ಕೇಂದ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಾಣದ ಕಾಮಗಾರಿ ವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಸಿ.ಒ.ಕುಮಾರ್, ತಹಶಿಲ್ದಾರ್ ರಶ್ಮಿ. ಎಸ್.ಆರ್, ಬಂಟ್ವಾಳ ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು, ಸಮುದಾಯ ಆರೋಗ್ಯ ಕೇಂದ್ರ ದ ಪ್ರಭಾರ ವೈದ್ಯಾಧಿಕಾರಿ ಡಾ! ಸೌಮ್ಯ, ತಾ.ಪಂ.ಇ.ಒ.ರಾಜಣ್ಣ, ಬೂಡ ಆಧ್ಯಕ್ಷ ದೇವದಾಸ್ ಶೆಟ್ಟಿ, ಶಾಸಕರ ವಾರ್ ರೂಮ್ ಪ್ರಮುಖರಾದ ದೇವಪ್ಪ ಪೂಜಾರಿ, ಡೊಂಬಯ್ಯ ಅರಳ, ಕೇಶವ ದೈಪಲ ಉಪಸ್ಥಿತರಿದ್ದರು.

More from the blog

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...

ಗೋಳ್ತಮಜಲು : ಮಲ ತ್ಯಾಜ್ಯ ನಿರ್ವಹಣಾ ಘಟಕದ ನಿರ್ವಹಣೆಯಲ್ಲಿ ಎಡವಿತಾ ಸ್ಥಳೀಯಾಡಳಿತ?

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಬಹುಗ್ರಾಮ ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಾಮರ್ಥ್ಯದಷ್ಟು ತ್ಯಾಜ್ಯದ ಲೋಡ್ ಬಾರದೇ ಇದ್ದು, ಘಟಕದ ವ್ಯಾಪ್ತಿಗೆ ಬರುವ ಸ್ಥಳೀಯಾಡಳಿತಗಳು...

ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆ : ಕಾಗದ ಚೀಲ ತಯಾರಿಸಿದ ವಿದ್ಯಾರ್ಥಿಗಳು..

ಬಂಟ್ವಾಳ : ಬದಲಾವಣೆ ಎಂದರೆ ದೊಡ್ಡ ಕೆಲಸವಲ್ಲ. ಅದು ನಮ್ಮ ಮನೆಯಿಂದ, ನಮ್ಮ ಕೈಗಳಿಂದ ಆರಂಭವಾಗಬೇಕು.ಇಂದು ನಾವು ತೀರ್ಮಾನ ಮಾಡಿದರೆ –ಪ್ಲಾಸ್ಟಿಕ್ ಚೀಲಕ್ಕೆ “ಇಲ್ಲ” ಎಂದು ಹೇಳಿದರೆ, ಪೇಪರ್ ಅಥವಾ ಬಟ್ಟೆ ಚೀಲ...

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...