Wednesday, June 25, 2025

ಮುಂಭಾಗ ಪತಿ..ಹಿಂಬದಿಯಲ್ಲಿ ಪತ್ನಿ !

ಬಂಟ್ವಾಳ:    ಬುಧವಾರ ಶಾಸಕ ಯು.ರಾಜೇಶ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಂಟ್ವಾಳ ತಾಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪತಿ,ಪತ್ನಿಯರಿಬ್ಬರು ಹಿಂದೆ- ಮುಂದೆ ಕುಳಿತು ಚರ್ಚೆಯಲ್ಲಿ ಪಾಲ್ಗೊಂಡು ಗಮನಸೆಳೆದರು.ಜಿಪಂಸದಸ್ಯ ರವೀಂದ್ರ ಕಂಬಳಿ ಅವರು ಸಭೆಯ ಮುಂಭಾಗದಲ್ಲಿ ಕುಳಿತು ಚರ್ಚೆಯಲ್ಲಿ ಭಾಗವಹಿಸಿದ್ದರೆ,ಇವರ ಪತ್ನಿ ಗಾಯತ್ರಿ ರವೀಂದ್ರ ಕಂಬಳಿ ಅವರು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾಧಿಕಾರಿಣಿ.ಇವರು ಪತಿಯ ಹಿಂಬದಿಯ ಸಾಲಿನಲ್ಲಿ ಕುಳಿತು ತಮ್ಮ ಇಲಾಖಾವಾರು ಪ್ರಗತಿ,ಅಂಗನವಾಡಿ ಕೇಂದ್ರದ ಸಮಸ್ಯೆಯನ್ನು ಸಭೆಯಲ್ಲಿ ಬಿಚ್ಚಿಟ್ಟರು.ಪತಿ ರವೀಂದ್ರ ಕಂಬಳಿ ಸಭೆಯಲ್ಲಿ ಎಂದು ನಿಂತು ಜನರ ಸಮಸ್ಯೆಯನ್ನು ಮುಂದಿಟ್ಟಾಗ ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಗಾಯತ್ರಿ ಕಂಬಳಿಯವರು  ತನ್ನ ಇಲಾಖೆಗೆ ಸಂಬಂಧಿಸಿ ಏನಾದರೂ  ಪ್ರಶ್ನೆ ಹಾಕುತ್ತಾರಾ ಎಂದು ಕಣ್ಣು ,ಕಿವಿ ಅರಳಿಸಿ ಆಲಿಸುತ್ತಿದ್ದರೆ,ಪತ್ನಿ ತಮ್ಮ ಇಲಾಖೆಗೆ ಸಂಬಂಧಿಸಿ ಮಾಹಿತಿ ನೀಡಿದಾಗ ಮುಂದಿನ ಸೀಟಿನಲ್ಲಿ ಕುಳಿತಿದ್ದ ಪತಿ ತದೇಕಚ್ಚಿತ್ತದಿಂದ ಆಲಿಸುತ್ತಿದ್ದ ದೃಶ್ಯ ಕಂಡು ಬಂತು

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...