Wednesday, February 12, 2025

ಮುಂಭಾಗ ಪತಿ..ಹಿಂಬದಿಯಲ್ಲಿ ಪತ್ನಿ !

ಬಂಟ್ವಾಳ:    ಬುಧವಾರ ಶಾಸಕ ಯು.ರಾಜೇಶ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಂಟ್ವಾಳ ತಾಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪತಿ,ಪತ್ನಿಯರಿಬ್ಬರು ಹಿಂದೆ- ಮುಂದೆ ಕುಳಿತು ಚರ್ಚೆಯಲ್ಲಿ ಪಾಲ್ಗೊಂಡು ಗಮನಸೆಳೆದರು.ಜಿಪಂಸದಸ್ಯ ರವೀಂದ್ರ ಕಂಬಳಿ ಅವರು ಸಭೆಯ ಮುಂಭಾಗದಲ್ಲಿ ಕುಳಿತು ಚರ್ಚೆಯಲ್ಲಿ ಭಾಗವಹಿಸಿದ್ದರೆ,ಇವರ ಪತ್ನಿ ಗಾಯತ್ರಿ ರವೀಂದ್ರ ಕಂಬಳಿ ಅವರು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾಧಿಕಾರಿಣಿ.ಇವರು ಪತಿಯ ಹಿಂಬದಿಯ ಸಾಲಿನಲ್ಲಿ ಕುಳಿತು ತಮ್ಮ ಇಲಾಖಾವಾರು ಪ್ರಗತಿ,ಅಂಗನವಾಡಿ ಕೇಂದ್ರದ ಸಮಸ್ಯೆಯನ್ನು ಸಭೆಯಲ್ಲಿ ಬಿಚ್ಚಿಟ್ಟರು.ಪತಿ ರವೀಂದ್ರ ಕಂಬಳಿ ಸಭೆಯಲ್ಲಿ ಎಂದು ನಿಂತು ಜನರ ಸಮಸ್ಯೆಯನ್ನು ಮುಂದಿಟ್ಟಾಗ ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಗಾಯತ್ರಿ ಕಂಬಳಿಯವರು  ತನ್ನ ಇಲಾಖೆಗೆ ಸಂಬಂಧಿಸಿ ಏನಾದರೂ  ಪ್ರಶ್ನೆ ಹಾಕುತ್ತಾರಾ ಎಂದು ಕಣ್ಣು ,ಕಿವಿ ಅರಳಿಸಿ ಆಲಿಸುತ್ತಿದ್ದರೆ,ಪತ್ನಿ ತಮ್ಮ ಇಲಾಖೆಗೆ ಸಂಬಂಧಿಸಿ ಮಾಹಿತಿ ನೀಡಿದಾಗ ಮುಂದಿನ ಸೀಟಿನಲ್ಲಿ ಕುಳಿತಿದ್ದ ಪತಿ ತದೇಕಚ್ಚಿತ್ತದಿಂದ ಆಲಿಸುತ್ತಿದ್ದ ದೃಶ್ಯ ಕಂಡು ಬಂತು

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...