Wednesday, June 25, 2025

ಡಾ. ಪದ್ಮನಾಭ ಕಾಮತ್ ನೇತೃತ್ವದ ಕೆಡ್ ಸಂಸ್ಥೆಯ ಆರೋಗ್ಯ ಸೇವೆ ದೇಶಕ್ಕೆ ಮಾದರಿ :ಪ್ರಭಾಕರ ಪ್ರಭು

ಬಂಟ್ವಾಳ: ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ನೇತೃತ್ವದಲ್ಲಿನ ಕಾರ್ಡಿಯಲಾಜಿ ಎಟ್ ಡೋರ್ ಸ್ಟೆಪ್ (ಕೆಡ್ ) CAD. ಪೌಂಡೇಷನ್ ಟ್ರಸ್ಟ್ ಇದರ ಪ್ರಾಯೋಜಕತ್ವದಲ್ಲಿನ ಟ್ರಸ್ಟ್ ಗೆ ಸ್ಥಳೀಯ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭುರವರು ವಿನಂತಿ ಮೇರೆಗೆ ಸಂಗಬೆಟ್ಟು ಆರೋಗ್ಯ ಉಪ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ ಇ. ಸಿ. ಜಿ. ಟೆಲಿಕನ್ಸಲೇಷನ್ ಮೆಷಿನ್ ನನ್ನು ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿಗೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕೆಡ್ ಸಂಸ್ಥೆಯ ಪರವಾಗಿ ಗುರುರಾಜ್ ಮತ್ತು ಶಿವಕುಮಾರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಮಾತಾನಾಡಿ ಡಾ. ಪದ್ಮನಾಭ ಕಾಮತ್ ನೇತೃತ್ವದಲ್ಲಿ ಕೆಡ್ ಸಂಸ್ಥೆಯು ಕಳೆದ 3–4 ವರ್ಷಗಳಿಂದ ಹೃದಯ ಸಂಬಂಧ ಹಲವಾರು ಸೇವೆಯನ್ನು ಸಲ್ಲಿಸುವ ಮೂಲಕ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ. ಸಿ. ಜಿ. ಮೆಷಿನ್ ನೀಡುತ್ತಾ ಬಂದಿದ್ದು,ಇತ್ತೀಚಿನ ದಿನಗಳಲ್ಲಿ ಇದನ್ನು ಹಳ್ಳಿಗಾಡಿನ ಪ್ರದೇಶಗಳಿಗೆ ವಿಸ್ತರಿಸಿ ಪ್ರತಿ ಗ್ರಾಮ ಪಂಚಾಯತ್, ಪ್ರತಿ ಆರೋಗ್ಯ ಉಪ ಕೇಂದ್ರ ವ್ಯಾಪ್ತಿಯ ಜನರಿಗೆ ಹೃದಯದ ಆರೋಗ್ಯ ವಿಚಾರಕ್ಕೆ ಪರೀಕ್ಷೆಗೆ ಬಹಳಷ್ಟು ಉಪಕಾರಿಯಾಗಿದೆ. ಈ ನಿಟ್ಟಿನಲ್ಲಿ ಕೆಡ್ ಸಂಸ್ಥೆಯ ಕಾರ್ಯವೈಖರಿ ದೇಶ ಕ್ಕೆ ಮಾದರಿಯಾಗಿದೆ ಎಂದರು.
ಇ. ಸಿ. ಜಿ.ಮೆಷಿನ್ ಪಡೆದುಕೊಂಡ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಮಾತಾನಾಡಿ ಸಂಗಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇ. ಸಿ. ಜಿ. ಟೆಲಿಕನ್ಸಲೇಷನ್ ಸೆಂಟರ್ ಸ್ಥಾಪಿಸಿದ ಕೆಡ್ ಸಂಸ್ಥೆಗೆ ಕ್ರತಜ್ಯತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಮಲ ಮೋಹನ್ ಮೂಲ್ಯ ಸದಸ್ಯರಾದ ದಾಮೋದರ ಪೂಜಾರಿ, ಸುರೇಶ ಕುಲಾಲ್, ಸುನೀಲ್ ಶೆಟ್ಟಿಗಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮ ನಾಯ್ಕ್, ಕಾರ್ಯದರ್ಶಿ ರೋಹಿಣಿ, ಆರೋಗ್ಯ ಉಪ ಕೇಂದ್ರದ ಆರೋಗ್ಯ ಸಹಾಯಕಿ ಜ್ಯೋತಿ ಆರ್ ಉಪಸ್ಥಿತರಿದ್ದರು..

More from the blog

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...