Sunday, January 25, 2026

ಕೋಡಪದವು: ಮದುವೆ ಔತಣದ ಜೊತೆ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ವಿಟ್ಲ: ಬಂಟ್ವಾಳ ತಾಲೂಕಿನ ಕೋಡಪದವು ಸಮೀಪದ ಕುಕ್ಕಿಲ ಎಂಬಲ್ಲಿ ಹಿಂದೂ ಯುವಕನೋರ್ವ ತನ್ನ ಮದುವೆಯ ಔತಣಕೂಟದ ಅಂಗವಾಗಿ ಮಸೀದಿಯಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ.
ಕೋಡಪದವಿನ ಕುಕ್ಕಿಲ ನಿವಾಸಿ, ನವವಿವಾಹಿತ ಧನಂಜಯ್ ಎಂಬವರು ಇಫ್ತಾರ್ ಕೂಟವನ್ನು ಆಯೋಜಿದ್ದರು. ಈ ಸಂದರ್ಭದಲ್ಲಿ ಕೋಡಪದವು ಹಾಗೂ ಕುಕ್ಕಿಲ ಜಮಾಅತ್‌ನ ಸುಮಾರು 150 ಮಂದಿ ಕುಕ್ಕಿಲ ಮಸೀದಿಯಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಉಪವಾಸ ತೊರೆದು ಸಾಕ್ಷಿಯಾದರು.
ಕೋಡಪದವಿನ ಕುಕ್ಕಿಲದ ನಿವಾಸಿ ಜತ್ತನ್ನ (ಜತ್ತು ಮೇಸ್ತ್ರಿ) ಅವರ ಪುತ್ರ ಧನಂಜಯ್‌ರಿಗೆ ಪೆರ್ಲದ ನಿವಾಸಿ ಮಾಲತಿ ಎಂಬವರ ಜೊತೆ ಮೇ ೮ರಂದು ವಿಟ್ಲ ಶ್ರೀರಾಮ ಮಂದಿರಲ್ಲಿ ಮದುವೆ ನಡೆದಿತ್ತು. ತನ್ನ ಮದುವೆಗೆ ಊರಿನ ಎಲ್ಲರನ್ನೂ ಆಹ್ವಾನಿಸಲಾಗಿತ್ತು. ಈ ಸಂದರ್ಭ ಊರಿನ ಮುಸ್ಲಿಮರು ಮದುವೆಗೆ ಬಂದು ಶುಭ ಹಾರೈಸಿ ತೆರಳಿದ್ದು, ರಂಜಾನ್ ಉಪವಾಸದ ಕಾರಣ ಮದುವೆಯ ಔತಣಕೂಟದಲ್ಲಿ ಅವರು ಭಾಗವಹಿಸಿರಲಿಲ್ಲ. ಈ ಕಾರಣದಿಂದ ಕುಕ್ಕಿಲದ ಮಸೀದಿಯಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು.
ಧನಂಜಯ್ ಅವರು ಕಳೆದ ೨ವರ್ಷಗಳಿಂದ ಕಲ್ಲಡ್ಕದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ.
“ಸೌಹಾರ್ದತೆಗೆ ಬೇಕು ಮೂಲ ಮನಸು, ಜನರು ಮೆಚ್ಚುತ್ತಾರೆ ಜಾತಿ-ಬೇಧವಿಲ್ಲದ ಮನಸು” ಎಂಬ ಶೀರ್ಷಿಕೆಯೊಂದಿಗೆ ಧನಂಜಯ್ ಅವರ ವೈವಾಹಿಕ ಜೀವನಕ್ಕೆ ಶುಭ ಹಾರೈಕೆ ಹಾಗೂ ಜನರ ಪ್ರಶಂಸೆಗೆ ಪಾತ್ರವಾದ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...