Wednesday, February 12, 2025

ಕೋಡಪದವು: ಮದುವೆ ಔತಣದ ಜೊತೆ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ವಿಟ್ಲ: ಬಂಟ್ವಾಳ ತಾಲೂಕಿನ ಕೋಡಪದವು ಸಮೀಪದ ಕುಕ್ಕಿಲ ಎಂಬಲ್ಲಿ ಹಿಂದೂ ಯುವಕನೋರ್ವ ತನ್ನ ಮದುವೆಯ ಔತಣಕೂಟದ ಅಂಗವಾಗಿ ಮಸೀದಿಯಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ.
ಕೋಡಪದವಿನ ಕುಕ್ಕಿಲ ನಿವಾಸಿ, ನವವಿವಾಹಿತ ಧನಂಜಯ್ ಎಂಬವರು ಇಫ್ತಾರ್ ಕೂಟವನ್ನು ಆಯೋಜಿದ್ದರು. ಈ ಸಂದರ್ಭದಲ್ಲಿ ಕೋಡಪದವು ಹಾಗೂ ಕುಕ್ಕಿಲ ಜಮಾಅತ್‌ನ ಸುಮಾರು 150 ಮಂದಿ ಕುಕ್ಕಿಲ ಮಸೀದಿಯಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಉಪವಾಸ ತೊರೆದು ಸಾಕ್ಷಿಯಾದರು.
ಕೋಡಪದವಿನ ಕುಕ್ಕಿಲದ ನಿವಾಸಿ ಜತ್ತನ್ನ (ಜತ್ತು ಮೇಸ್ತ್ರಿ) ಅವರ ಪುತ್ರ ಧನಂಜಯ್‌ರಿಗೆ ಪೆರ್ಲದ ನಿವಾಸಿ ಮಾಲತಿ ಎಂಬವರ ಜೊತೆ ಮೇ ೮ರಂದು ವಿಟ್ಲ ಶ್ರೀರಾಮ ಮಂದಿರಲ್ಲಿ ಮದುವೆ ನಡೆದಿತ್ತು. ತನ್ನ ಮದುವೆಗೆ ಊರಿನ ಎಲ್ಲರನ್ನೂ ಆಹ್ವಾನಿಸಲಾಗಿತ್ತು. ಈ ಸಂದರ್ಭ ಊರಿನ ಮುಸ್ಲಿಮರು ಮದುವೆಗೆ ಬಂದು ಶುಭ ಹಾರೈಸಿ ತೆರಳಿದ್ದು, ರಂಜಾನ್ ಉಪವಾಸದ ಕಾರಣ ಮದುವೆಯ ಔತಣಕೂಟದಲ್ಲಿ ಅವರು ಭಾಗವಹಿಸಿರಲಿಲ್ಲ. ಈ ಕಾರಣದಿಂದ ಕುಕ್ಕಿಲದ ಮಸೀದಿಯಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು.
ಧನಂಜಯ್ ಅವರು ಕಳೆದ ೨ವರ್ಷಗಳಿಂದ ಕಲ್ಲಡ್ಕದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ.
“ಸೌಹಾರ್ದತೆಗೆ ಬೇಕು ಮೂಲ ಮನಸು, ಜನರು ಮೆಚ್ಚುತ್ತಾರೆ ಜಾತಿ-ಬೇಧವಿಲ್ಲದ ಮನಸು” ಎಂಬ ಶೀರ್ಷಿಕೆಯೊಂದಿಗೆ ಧನಂಜಯ್ ಅವರ ವೈವಾಹಿಕ ಜೀವನಕ್ಕೆ ಶುಭ ಹಾರೈಕೆ ಹಾಗೂ ಜನರ ಪ್ರಶಂಸೆಗೆ ಪಾತ್ರವಾದ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...