ವಿಟ್ಲ: ಪಡ್ನೂರು ಗ್ರಾಮದ ಕಡಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುತ್ತೂರು ಎಂ. ಸಂಜೀವ ಶೆಟ್ಟಿ ಬಟ್ಟೆ ವ್ಯಾಪಾರಿ ಮಳಿಗೆಯವರು ಕೊಡುಗೆಯಾಗಿ ನೀಡಿದ ಸಮವಸ್ತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಬಿ.ಎಂ ಹಸೈನಾರ್, ಉಪಾಧ್ಯಕ್ಷೆ ಹೇಮಾವತಿ, ಸದಸ್ಯ ಅಬ್ದುಲ್ ರೆಹೆಮಾನ್, ಮುಖ್ಯ ಶಿಕ್ಷಕ ರಾಮಚಂದ್ರ ನಾಯ್ಕ್, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.














